Categories: ರಾಜ್ಯ

ಪ್ರತಿಭಟನೆ ಸ್ಥಳಕ್ಕೆ ಬಾರದ ತಹಶೀಲ್ದಾರ್ ವಿರುದ್ಧ ಆಕ್ರೋಶ

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಾಗರೀಕ ಹೋರಾಟ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸುವಾಗ ಸ್ಥಳಕ್ಕೆ ಬಾರದ ತಹಶಿಲ್ದಾರ ಚೆನ್ನಮಲ್ಲಪ್ಪ ಘಂಟಿ ವಿರುದ್ಧ ಕ್ರಾಂತಿ ಮಂತ್ರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿರುವ ಟೋಲ್ ಗೇಟ್,ಅಂಬೇಡ್ಕರ್ ವೃತ್ತ ಕಾಮಗಾರಿ ನವೀಕರಣ,ಹಳೆ ಪ್ರವಾಸಿ ಮಂದಿರಕ್ಕೆ ಶಾಸಕರ ಹೆಸರು ನಾಮಫಲಕ ಹಾಕಿದ ಬೋರ್ಡ್,ವಿವಿಧ ಬೇಡಿಕೆಗಳ ಸೇರಿದಂತೆ,ಎಲ್ಲಾ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಸೇರಿಕೊಂಡು ಹೋರಾಟ ಮಾಡಿದರು.

ಬೇಡಿಕೆಗಳನ್ನು ಸ್ಥಳೀಯ ಶಾಸಕಿಗೆ ಸಂಭಂದಿಸಿದ, ಹಲವಾರು ಸಮಸ್ಯೆಗಳು ಇರುವುದರಿಂದ ಶಾಸಕಿಯ ಅಣತಿಯಂತೆ ಕೆಲಸ ಮಾಡುವ ತಾಲೂಕಿಗೆ ದಂಡವಾದ ದಂಡಾಧಿಕಾರಿ ಮತ್ತು ಸಿಬ್ಬಂದಿಗಳು ಹೋರಾಟ ಸ್ಥಳಕ್ಕೆ ಆಗಮಿಸದೆ,ಪಲಾಯನ ಮಾಡಿ ಹೋರಾಟಗಾರರಿಗೆ ಅವಮಾನಿಸಿದ್ದಾರೆ ಎಂದರು.

ಅಧಿಕಾರಿಗಳು ಬರಲೇ ಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದು,ಅಂಬೇಡ್ಕರ್ ಕ್ರಾಂತಿ ಗೀತೆ ಆಡುವ ಮೂಲಕ ರಸ್ತೆ ಬಂದ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಸ್ಥಳಕ್ಕೆ ದೌಡಾಸಿದ ಸಿಪಿಐ,ಪಿಎಸ್ಐ ಇನ್ನೂ ಕೆಲ ಅಧಿಕಾರಿಗಳು ಬಂದು ಸ್ವಾಂತನ ಹೇಳಿದ ಮೇಲೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.

ಈ ಸಂದರ್ಭದಲ್ಲಿ ಮನುಮಂತ ಮನ್ನಾಪುರಿ,‌ ಆದರ್ಶ ನಾಯಕ, ಹನುಮಂತ ಕಾಕರಗಲ್, ವಿಶ್ವನಾಥ ಬಲ್ಲಿದವ, ಭೀಮನಗೌಡ, ಕ್ರಾಂತಿಕುಮಾರ್, ಶಾಂತಕುಮಾರ ಹೊನ್ನುಟಗಿ, ವೆಂಕನಗೌಡ ವಕೀಲ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

8 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

9 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

14 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

15 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 day ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago