Categories: ರಾಜ್ಯ

ಪ್ರತಿಭಟನೆ ಸ್ಥಳಕ್ಕೆ ಬಾರದ ತಹಶೀಲ್ದಾರ್ ವಿರುದ್ಧ ಆಕ್ರೋಶ

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಾಗರೀಕ ಹೋರಾಟ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸುವಾಗ ಸ್ಥಳಕ್ಕೆ ಬಾರದ ತಹಶಿಲ್ದಾರ ಚೆನ್ನಮಲ್ಲಪ್ಪ ಘಂಟಿ ವಿರುದ್ಧ ಕ್ರಾಂತಿ ಮಂತ್ರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿರುವ ಟೋಲ್ ಗೇಟ್,ಅಂಬೇಡ್ಕರ್ ವೃತ್ತ ಕಾಮಗಾರಿ ನವೀಕರಣ,ಹಳೆ ಪ್ರವಾಸಿ ಮಂದಿರಕ್ಕೆ ಶಾಸಕರ ಹೆಸರು ನಾಮಫಲಕ ಹಾಕಿದ ಬೋರ್ಡ್,ವಿವಿಧ ಬೇಡಿಕೆಗಳ ಸೇರಿದಂತೆ,ಎಲ್ಲಾ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಸೇರಿಕೊಂಡು ಹೋರಾಟ ಮಾಡಿದರು.

ಬೇಡಿಕೆಗಳನ್ನು ಸ್ಥಳೀಯ ಶಾಸಕಿಗೆ ಸಂಭಂದಿಸಿದ, ಹಲವಾರು ಸಮಸ್ಯೆಗಳು ಇರುವುದರಿಂದ ಶಾಸಕಿಯ ಅಣತಿಯಂತೆ ಕೆಲಸ ಮಾಡುವ ತಾಲೂಕಿಗೆ ದಂಡವಾದ ದಂಡಾಧಿಕಾರಿ ಮತ್ತು ಸಿಬ್ಬಂದಿಗಳು ಹೋರಾಟ ಸ್ಥಳಕ್ಕೆ ಆಗಮಿಸದೆ,ಪಲಾಯನ ಮಾಡಿ ಹೋರಾಟಗಾರರಿಗೆ ಅವಮಾನಿಸಿದ್ದಾರೆ ಎಂದರು.

ಅಧಿಕಾರಿಗಳು ಬರಲೇ ಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದು,ಅಂಬೇಡ್ಕರ್ ಕ್ರಾಂತಿ ಗೀತೆ ಆಡುವ ಮೂಲಕ ರಸ್ತೆ ಬಂದ್ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಸ್ಥಳಕ್ಕೆ ದೌಡಾಸಿದ ಸಿಪಿಐ,ಪಿಎಸ್ಐ ಇನ್ನೂ ಕೆಲ ಅಧಿಕಾರಿಗಳು ಬಂದು ಸ್ವಾಂತನ ಹೇಳಿದ ಮೇಲೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಡಲಾಯಿತು.

ಈ ಸಂದರ್ಭದಲ್ಲಿ ಮನುಮಂತ ಮನ್ನಾಪುರಿ,‌ ಆದರ್ಶ ನಾಯಕ, ಹನುಮಂತ ಕಾಕರಗಲ್, ವಿಶ್ವನಾಥ ಬಲ್ಲಿದವ, ಭೀಮನಗೌಡ, ಕ್ರಾಂತಿಕುಮಾರ್, ಶಾಂತಕುಮಾರ ಹೊನ್ನುಟಗಿ, ವೆಂಕನಗೌಡ ವಕೀಲ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

55 minutes ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago