ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೋರಾಟ ಮುಂದುವರೆಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು “ನಮ್ಮ ನಡಿಗೆ ಸಂವಿಧಾನದ ಕಡೆಗೆ” ಅಭಿಯಾನವನ್ನು ಉದ್ಘಾಟಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಅವರು ಮಾತನಾಡಿದರು.
ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.
ಅಂಬೇಡ್ಕರ್ ಅವರು ಇಂತಹ ಶ್ರೇಷ್ಠ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.
ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು. ಸಾವಿರಾರು ವರ್ಷಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ ಎಂದರು.
ಈ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಭವಿಷ್ಯವನ್ನೂ ರೂಪಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ನೂರಕ್ಕೆ ನೂರರಷ್ಟು ನಿಜ ಎಂದು ಹೇಳಿದರು.
ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತರ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ ಎಂದರು.
ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.
ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…