Categories: ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೋರಾಟ ಮುಂದುವರೆಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು “ನಮ್ಮ ನಡಿಗೆ ಸಂವಿಧಾನದ ಕಡೆಗೆ” ಅಭಿಯಾನವನ್ನು ಉದ್ಘಾಟಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ‌ ಅವರು ಮಾತನಾಡಿದರು.

ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಅಂಬೇಡ್ಕರ್ ಅವರು ಇಂತಹ ಶ್ರೇಷ್ಠ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.

ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು. ಸಾವಿರಾರು ವರ್ಷಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ ಎಂದರು.

ಈ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಭವಿಷ್ಯವನ್ನೂ ರೂಪಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ನೂರಕ್ಕೆ ನೂರರಷ್ಟು ನಿಜ ಎಂದು ಹೇಳಿದರು.

ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತರ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ ಎಂದರು.

ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago