Categories: ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೋರಾಟ ಮುಂದುವರೆಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು “ನಮ್ಮ ನಡಿಗೆ ಸಂವಿಧಾನದ ಕಡೆಗೆ” ಅಭಿಯಾನವನ್ನು ಉದ್ಘಾಟಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ‌ ಅವರು ಮಾತನಾಡಿದರು.

ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಅಂಬೇಡ್ಕರ್ ಅವರು ಇಂತಹ ಶ್ರೇಷ್ಠ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.

ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು. ಸಾವಿರಾರು ವರ್ಷಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ ಎಂದರು.

ಈ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಭವಿಷ್ಯವನ್ನೂ ರೂಪಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ನೂರಕ್ಕೆ ನೂರರಷ್ಟು ನಿಜ ಎಂದು ಹೇಳಿದರು.

ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತರ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ ಎಂದರು.

ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 hour ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

3 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

6 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

20 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago