Categories: ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೋರಾಟ ಮುಂದುವರೆಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು “ನಮ್ಮ ನಡಿಗೆ ಸಂವಿಧಾನದ ಕಡೆಗೆ” ಅಭಿಯಾನವನ್ನು ಉದ್ಘಾಟಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ‌ ಅವರು ಮಾತನಾಡಿದರು.

ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಅಂಬೇಡ್ಕರ್ ಅವರು ಇಂತಹ ಶ್ರೇಷ್ಠ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.

ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು. ಸಾವಿರಾರು ವರ್ಷಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ ಎಂದರು.

ಈ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಭವಿಷ್ಯವನ್ನೂ ರೂಪಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ನೂರಕ್ಕೆ ನೂರರಷ್ಟು ನಿಜ ಎಂದು ಹೇಳಿದರು.

ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತರ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ ಎಂದರು.

ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

49 minutes ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

5 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

6 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

20 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago