ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೋರಾಟ ಮುಂದುವರೆಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು “ನಮ್ಮ ನಡಿಗೆ ಸಂವಿಧಾನದ ಕಡೆಗೆ” ಅಭಿಯಾನವನ್ನು ಉದ್ಘಾಟಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಅವರು ಮಾತನಾಡಿದರು.
ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.
ಅಂಬೇಡ್ಕರ್ ಅವರು ಇಂತಹ ಶ್ರೇಷ್ಠ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.
ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು. ಸಾವಿರಾರು ವರ್ಷಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ ಎಂದರು.
ಈ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಭವಿಷ್ಯವನ್ನೂ ರೂಪಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ನೂರಕ್ಕೆ ನೂರರಷ್ಟು ನಿಜ ಎಂದು ಹೇಳಿದರು.
ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತರ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ ಎಂದರು.
ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.
ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…