Categories: ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೋರಾಟ ಮುಂದುವರೆಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಮತ್ತು “ನಮ್ಮ ನಡಿಗೆ ಸಂವಿಧಾನದ ಕಡೆಗೆ” ಅಭಿಯಾನವನ್ನು ಉದ್ಘಾಟಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ‌ ಅವರು ಮಾತನಾಡಿದರು.

ಮನುಷ್ಯ ತಾರತಮ್ಯವನ್ನು ಆಚರಿಸುವ ಚಾತುರ್ವರ್ಣ ಮತ್ತು ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿದ್ದಲ್ಲ. ತಮ್ಮ ಸ್ವಾರ್ಥಕ್ಕಾಗಿ ಕೆಲವು ಮನುಷ್ಯರೇ ಸೃಷ್ಟಿಸಿದ್ದು. ಈ ತಾರತಮ್ಯವನ್ನು ಅಳಿಸುವುದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಈ ಉದ್ದೇಶಕ್ಕಾಗಿ ಹೋರಾಟ ಮುಂದುವರೆಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಅಂಬೇಡ್ಕರ್ ಅವರು ಇಂತಹ ಶ್ರೇಷ್ಠ ಸಂವಿಧಾನ ಕೊಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಆಗುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.

ಅಂಬೇಡ್ಕರ್ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನದಿಂದ ನಡೆದುಕೊಳ್ಳಬೇಕು. ಸಾವಿರಾರು ವರ್ಷಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೂದ್ರ, ದಲಿತರು ಮತ್ತು ಮಹಿಳೆಯರಿಗೆ ಅಂಬೇಡ್ಕರ್ ಅವರ ಸಂವಿಧಾನ ಶಿಕ್ಷಣದ ಹಕ್ಕನ್ನು ಒದಗಿಸಿಕೊಟ್ಟಿತು. ಅದಕ್ಕೂ ಮೊದಲು ಮೇಲು ಜಾತಿಯ ಮಹಿಳೆಯರಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ ಎಂದರು.

ಈ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯಾರಿಗೆ ಇತಿಹಾಸ ಗೊತ್ತಿರುವುದಿಲ್ಲವೋ ಅವರು ಭವಿಷ್ಯವನ್ನೂ ರೂಪಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ನೂರಕ್ಕೆ ನೂರರಷ್ಟು ನಿಜ ಎಂದು ಹೇಳಿದರು.

ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತರ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ ಎಂದರು.

ಸಂವಿಧಾನ ಬದಲಾವಣೆಯ ಕೂಗನ್ನು ಕೆಲವರು ಹಾಕುತ್ತಿದ್ದಾರೆ. ಸಂವಿಧಾನ ಬದಲಾದರೆ ನಂತರದ ಧಾರುಣ ಬದುಕನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಾಸಕ ದರ್ಶನ್ ದ್ರುವನಾರಾಯಣ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ದಲಿತ ಮುಖಂಡರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

12 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago