ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ತಾಲ್ಲೂಕಿನ ರಾಜಘಟ್ಟ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಶಿವಕುಮಾರ್ ಅವರ ಜನ್ಮದಿನದ ಅಂಗವಾಗಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.80ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕಳೆದ ಐದು ವರ್ಷಗಳಿಂದ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದು ಮಾದರಿ ಕಾರ್ಯವಾಗಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಜೀವನದ ಪಾಠಗಳನ್ನೂ ಕಲಿಯಬೇಕಿದೆ ಎಂದು ಸಲಹೆ ನೀಡಿದರು.

ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಇಂದಿನ ಸಮಾಜದಲ್ಲಿ ಹಣದ ಸಂಪಾದನೆಯನ್ನೇ ಮಾನದಂಡವಾಗಿ ಕಾಣಲಾಗುತ್ತಿದ್ದು, ಮಾನವೀಯ ಮೌಲ್ಯಗಳಿಗೆ ಬೆಲೆ ಕಡಿಮೆಯಾಗುತ್ತಿದೆ. ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಅಡಗಿದ್ದು, ಅದನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಮಹತ್ವದ ತಿರುವಿನ ಘಟ್ಟವಾಗಿದ್ದು, ಇಲ್ಲಿ ಸಾಧನೆ ಮಾಡಿದರೆ ಮುಂದಿನ ಗುರಿ ತಲುಪುವುದು ಸುಲಭವಾಗುತ್ತದೆ ಎಂದು ಹೇಳಿದರು.

ಜೆಡಿಎಸ್ ಮುಖಂಡ ಶಿವಕುಮಾರ್ ಮಾತನಾಡಿ, ಬಡ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಹಣ್ಣುಹಂಪಲು ವಿತರಣೆ ಮಾಡಲಾಗಿದೆ. ರಾಜಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುತ್ತಿರುವುದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಧೈರ್ಯ ತುಂಬುವ ಉದ್ದೇಶದಿಂದ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಲಾಯಿತು. ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಇದೇ ವೇಳೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಬಿ. ಮುನೇಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಸ್ ಹರೀಶ್, ರಾಜಘಟ್ಟ ವಿಎಸ್‌ಎಸ್‌ಎನ್ ಅಧ್ಯಕ್ಷ ಮುನಿಹನುಮಯ್ಯ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೋಡಿ ನರಸಿಂಹಮೂರ್ತಿ, ವೆಂಕಟರಮಣಪ್ಪ, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

4 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

5 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

17 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

17 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

18 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

19 hours ago