ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ- ಶಿಕ್ಷಣದಿಂದ ಎಲ್ಲರ ಪ್ರತಿಭೆಗಳೂ ಹೊರ ಬರುತ್ತದೆ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ”ವನ್ನು ಉದ್ಘಾಟಿಸಿ, ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.

ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಬ್ರಿಟಿಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದು ತಿಳಿಸಿದರು.

ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದಿದ್ದೆ ಎಂದರು.

ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.

ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆಗಳು ಹೆಚ್ಚಿದ್ದು ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಪರಿಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಆದ್ದರಿಂದ ಖಾಲಿಯಿರುವ ಗ್ರಾಮೀಣ ವೈದ್ಯ ಹುದ್ದೆಗಳನ್ನಷ್ಟೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ತಿಳಿಸಿದರು.

ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

10 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

14 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

15 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

1 day ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago