ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ- ಶಿಕ್ಷಣದಿಂದ ಎಲ್ಲರ ಪ್ರತಿಭೆಗಳೂ ಹೊರ ಬರುತ್ತದೆ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ”ವನ್ನು ಉದ್ಘಾಟಿಸಿ, ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.

ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಬ್ರಿಟಿಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದು ತಿಳಿಸಿದರು.

ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದಿದ್ದೆ ಎಂದರು.

ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.

ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆಗಳು ಹೆಚ್ಚಿದ್ದು ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಪರಿಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಆದ್ದರಿಂದ ಖಾಲಿಯಿರುವ ಗ್ರಾಮೀಣ ವೈದ್ಯ ಹುದ್ದೆಗಳನ್ನಷ್ಟೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ತಿಳಿಸಿದರು.

ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

6 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

10 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

17 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

18 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago