ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ- ಶಿಕ್ಷಣದಿಂದ ಎಲ್ಲರ ಪ್ರತಿಭೆಗಳೂ ಹೊರ ಬರುತ್ತದೆ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ”ವನ್ನು ಉದ್ಘಾಟಿಸಿ, ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.

ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಬ್ರಿಟಿಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದು ತಿಳಿಸಿದರು.

ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದಿದ್ದೆ ಎಂದರು.

ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.

ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆಗಳು ಹೆಚ್ಚಿದ್ದು ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಪರಿಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಆದ್ದರಿಂದ ಖಾಲಿಯಿರುವ ಗ್ರಾಮೀಣ ವೈದ್ಯ ಹುದ್ದೆಗಳನ್ನಷ್ಟೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ತಿಳಿಸಿದರು.

ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

13 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

14 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

14 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

14 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

16 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

20 hours ago