ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ- ಶಿಕ್ಷಣದಿಂದ ಎಲ್ಲರ ಪ್ರತಿಭೆಗಳೂ ಹೊರ ಬರುತ್ತದೆ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ”ವನ್ನು ಉದ್ಘಾಟಿಸಿ, ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.

ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಬ್ರಿಟಿಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದು ತಿಳಿಸಿದರು.

ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದಿದ್ದೆ ಎಂದರು.

ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.

ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆಗಳು ಹೆಚ್ಚಿದ್ದು ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಪರಿಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಆದ್ದರಿಂದ ಖಾಲಿಯಿರುವ ಗ್ರಾಮೀಣ ವೈದ್ಯ ಹುದ್ದೆಗಳನ್ನಷ್ಟೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ತಿಳಿಸಿದರು.

ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 minutes ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

8 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

13 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

22 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago