ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು – ಸಂಘಟಿತರಾಗಬೇಕು – ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು – ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್

ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು ಎಂದು
ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ವಕೀಲ ಆರ್.ವಿ ಮಹೇಶ್ ಕುಮಾರ್ ಹೇಳಿದರು.

ಅಂಬೇಡ್ಕರ್ ಅವರ ರೀತಿಯಲ್ಲಿ ಯುವ ಜನಾಂಗವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ಕಾಣಬಹುದು. ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಬೇಕು. ‘ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು’ ಎಂದು ಹೇಳುವುದರ ಮೂಲಕ ದೇಶದಲ್ಲಿನ ಅಸಮಾನತೆ ನಿವಾರಣೆಗೆ ಶಿಕ್ಷಣವೇ ಮೂಲ ಮದ್ದು ಎಂದು ಹೇಳಿದ್ದಾರೆ.

ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ ಕೊಟ್ಟಿರುವುದು ಭಾರತದ ಸಂವಿಧಾನ. ಅಂತಹ ಸಂವಿಧಾನ ಕೊಟ್ಟಿರುವುದು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು, ಶೋಷಿತರಿಗೆ, ಹಿಂದುಳಿದವರಿಗೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ಸರ್ವರು ಸ್ವಂತಂತ್ರರರು, ಸರ್ವರು ಸಮಾನರು, ಸರ್ವರಿಗೂ ಸಮಾನ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂಬ ತತ್ವದಡಿ ಸಂವಿಧಾನವನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದರು ಎಂದರು.

ಸಂವಿಧಾನದಿಂದ ಕೇವಲ ಒಂದು ಜಾತಿ, ಸಮುದಾಯ, ವರ್ಗಕ್ಕೆ ಸೀಮಿತವಾಗಿಲ್ಲ, ಭಾರತದ ಕೊಟ್ಟು ಕಡೆಯ ಪ್ರಜೆಗೂ ಸಮಾನ ಅವಕಾಶ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಜ್ಞಾನ ವೃದ್ಧಿಯಿಂದ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತದೆ ಎಂಬುದು ನನ್ನ ಭಾವನೆ ಎಂದರು.

ಅಂಬೇಡ್ಕ‌ರವರ ಮೂಲಮಂತ್ರ ಹಾಗೂ ಆಶಯಗಳನ್ನು ಎಲ್ಲರೂ ಪಾಲನೆ ಮಾಡಬೇಕು. ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಸಂಘಟಿತರಾಗಬೇಕು. ಅಂಬೇಡ್ಕರ್ ಇಲ್ಲದಿದ್ದರೆ ಶೋಷಿತರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದರು.

ಬಾಬಾ ಸಾಹೇಬ್ ಅವರು ಸುಮಾರು 32 ಪದವಿಗಳನ್ನು ಅಧ್ಯಯನ ಮಾಡಿದ್ದಾರೆ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಎಷ್ಟೇ ಮಾತನಾಡಿದರು ಅದು ಕಡಿಮೆ, ಅವರ ಸಾಧನೆ ಒಂದು ಜನಾಂಗಕ್ಕೆ ಮಾತ್ರ ಸೀಮಿತ ಅಲ್ಲ, ಇಡೀ ಜಗತ್ತಿಗೆ ಅವರು ಮಾಡಿರುವ ಸಾಧನೆ ಅಗಾಧ. ಅವರು ನಡೆದ ದಾರಿಯಲ್ಲಿ ಇಂದಿನ ಯುವ ಜನಾಂಗವು ಸಾಗಬೇಕು ಎಂದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

2 days ago