ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು – ಸಂಘಟಿತರಾಗಬೇಕು – ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು – ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್

ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು ಎಂದು
ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ವಕೀಲ ಆರ್.ವಿ ಮಹೇಶ್ ಕುಮಾರ್ ಹೇಳಿದರು.

ಅಂಬೇಡ್ಕರ್ ಅವರ ರೀತಿಯಲ್ಲಿ ಯುವ ಜನಾಂಗವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ಕಾಣಬಹುದು. ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಬೇಕು. ‘ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು’ ಎಂದು ಹೇಳುವುದರ ಮೂಲಕ ದೇಶದಲ್ಲಿನ ಅಸಮಾನತೆ ನಿವಾರಣೆಗೆ ಶಿಕ್ಷಣವೇ ಮೂಲ ಮದ್ದು ಎಂದು ಹೇಳಿದ್ದಾರೆ.

ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ ಕೊಟ್ಟಿರುವುದು ಭಾರತದ ಸಂವಿಧಾನ. ಅಂತಹ ಸಂವಿಧಾನ ಕೊಟ್ಟಿರುವುದು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು, ಶೋಷಿತರಿಗೆ, ಹಿಂದುಳಿದವರಿಗೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ಸರ್ವರು ಸ್ವಂತಂತ್ರರರು, ಸರ್ವರು ಸಮಾನರು, ಸರ್ವರಿಗೂ ಸಮಾನ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂಬ ತತ್ವದಡಿ ಸಂವಿಧಾನವನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದರು ಎಂದರು.

ಸಂವಿಧಾನದಿಂದ ಕೇವಲ ಒಂದು ಜಾತಿ, ಸಮುದಾಯ, ವರ್ಗಕ್ಕೆ ಸೀಮಿತವಾಗಿಲ್ಲ, ಭಾರತದ ಕೊಟ್ಟು ಕಡೆಯ ಪ್ರಜೆಗೂ ಸಮಾನ ಅವಕಾಶ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಜ್ಞಾನ ವೃದ್ಧಿಯಿಂದ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತದೆ ಎಂಬುದು ನನ್ನ ಭಾವನೆ ಎಂದರು.

ಅಂಬೇಡ್ಕ‌ರವರ ಮೂಲಮಂತ್ರ ಹಾಗೂ ಆಶಯಗಳನ್ನು ಎಲ್ಲರೂ ಪಾಲನೆ ಮಾಡಬೇಕು. ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಸಂಘಟಿತರಾಗಬೇಕು. ಅಂಬೇಡ್ಕರ್ ಇಲ್ಲದಿದ್ದರೆ ಶೋಷಿತರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದರು.

ಬಾಬಾ ಸಾಹೇಬ್ ಅವರು ಸುಮಾರು 32 ಪದವಿಗಳನ್ನು ಅಧ್ಯಯನ ಮಾಡಿದ್ದಾರೆ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಎಷ್ಟೇ ಮಾತನಾಡಿದರು ಅದು ಕಡಿಮೆ, ಅವರ ಸಾಧನೆ ಒಂದು ಜನಾಂಗಕ್ಕೆ ಮಾತ್ರ ಸೀಮಿತ ಅಲ್ಲ, ಇಡೀ ಜಗತ್ತಿಗೆ ಅವರು ಮಾಡಿರುವ ಸಾಧನೆ ಅಗಾಧ. ಅವರು ನಡೆದ ದಾರಿಯಲ್ಲಿ ಇಂದಿನ ಯುವ ಜನಾಂಗವು ಸಾಗಬೇಕು ಎಂದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

4 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

6 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

10 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

16 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago