ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು – ಸಂಘಟಿತರಾಗಬೇಕು – ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು – ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್

ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು ಎಂದು
ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ವಕೀಲ ಆರ್.ವಿ ಮಹೇಶ್ ಕುಮಾರ್ ಹೇಳಿದರು.

ಅಂಬೇಡ್ಕರ್ ಅವರ ರೀತಿಯಲ್ಲಿ ಯುವ ಜನಾಂಗವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ಕಾಣಬಹುದು. ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಬೇಕು. ‘ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು’ ಎಂದು ಹೇಳುವುದರ ಮೂಲಕ ದೇಶದಲ್ಲಿನ ಅಸಮಾನತೆ ನಿವಾರಣೆಗೆ ಶಿಕ್ಷಣವೇ ಮೂಲ ಮದ್ದು ಎಂದು ಹೇಳಿದ್ದಾರೆ.

ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ ಕೊಟ್ಟಿರುವುದು ಭಾರತದ ಸಂವಿಧಾನ. ಅಂತಹ ಸಂವಿಧಾನ ಕೊಟ್ಟಿರುವುದು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು, ಶೋಷಿತರಿಗೆ, ಹಿಂದುಳಿದವರಿಗೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ಸರ್ವರು ಸ್ವಂತಂತ್ರರರು, ಸರ್ವರು ಸಮಾನರು, ಸರ್ವರಿಗೂ ಸಮಾನ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂಬ ತತ್ವದಡಿ ಸಂವಿಧಾನವನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದರು ಎಂದರು.

ಸಂವಿಧಾನದಿಂದ ಕೇವಲ ಒಂದು ಜಾತಿ, ಸಮುದಾಯ, ವರ್ಗಕ್ಕೆ ಸೀಮಿತವಾಗಿಲ್ಲ, ಭಾರತದ ಕೊಟ್ಟು ಕಡೆಯ ಪ್ರಜೆಗೂ ಸಮಾನ ಅವಕಾಶ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಜ್ಞಾನ ವೃದ್ಧಿಯಿಂದ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತದೆ ಎಂಬುದು ನನ್ನ ಭಾವನೆ ಎಂದರು.

ಅಂಬೇಡ್ಕ‌ರವರ ಮೂಲಮಂತ್ರ ಹಾಗೂ ಆಶಯಗಳನ್ನು ಎಲ್ಲರೂ ಪಾಲನೆ ಮಾಡಬೇಕು. ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಸಂಘಟಿತರಾಗಬೇಕು. ಅಂಬೇಡ್ಕರ್ ಇಲ್ಲದಿದ್ದರೆ ಶೋಷಿತರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದರು.

ಬಾಬಾ ಸಾಹೇಬ್ ಅವರು ಸುಮಾರು 32 ಪದವಿಗಳನ್ನು ಅಧ್ಯಯನ ಮಾಡಿದ್ದಾರೆ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಎಷ್ಟೇ ಮಾತನಾಡಿದರು ಅದು ಕಡಿಮೆ, ಅವರ ಸಾಧನೆ ಒಂದು ಜನಾಂಗಕ್ಕೆ ಮಾತ್ರ ಸೀಮಿತ ಅಲ್ಲ, ಇಡೀ ಜಗತ್ತಿಗೆ ಅವರು ಮಾಡಿರುವ ಸಾಧನೆ ಅಗಾಧ. ಅವರು ನಡೆದ ದಾರಿಯಲ್ಲಿ ಇಂದಿನ ಯುವ ಜನಾಂಗವು ಸಾಗಬೇಕು ಎಂದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

7 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

7 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

8 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

8 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

9 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

17 hours ago