ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗಬೇಕು ಎಂದು
ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ವಕೀಲ ಆರ್.ವಿ ಮಹೇಶ್ ಕುಮಾರ್ ಹೇಳಿದರು.
ಅಂಬೇಡ್ಕರ್ ಅವರ ರೀತಿಯಲ್ಲಿ ಯುವ ಜನಾಂಗವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ಕಾಣಬಹುದು. ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಬೇಕು. ‘ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು’ ಎಂದು ಹೇಳುವುದರ ಮೂಲಕ ದೇಶದಲ್ಲಿನ ಅಸಮಾನತೆ ನಿವಾರಣೆಗೆ ಶಿಕ್ಷಣವೇ ಮೂಲ ಮದ್ದು ಎಂದು ಹೇಳಿದ್ದಾರೆ.
ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ ಕೊಟ್ಟಿರುವುದು ಭಾರತದ ಸಂವಿಧಾನ. ಅಂತಹ ಸಂವಿಧಾನ ಕೊಟ್ಟಿರುವುದು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು, ಶೋಷಿತರಿಗೆ, ಹಿಂದುಳಿದವರಿಗೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ಸರ್ವರು ಸ್ವಂತಂತ್ರರರು, ಸರ್ವರು ಸಮಾನರು, ಸರ್ವರಿಗೂ ಸಮಾನ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂಬ ತತ್ವದಡಿ ಸಂವಿಧಾನವನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದರು ಎಂದರು.
ಸಂವಿಧಾನದಿಂದ ಕೇವಲ ಒಂದು ಜಾತಿ, ಸಮುದಾಯ, ವರ್ಗಕ್ಕೆ ಸೀಮಿತವಾಗಿಲ್ಲ, ಭಾರತದ ಕೊಟ್ಟು ಕಡೆಯ ಪ್ರಜೆಗೂ ಸಮಾನ ಅವಕಾಶ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಜ್ಞಾನ ವೃದ್ಧಿಯಿಂದ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತದೆ ಎಂಬುದು ನನ್ನ ಭಾವನೆ ಎಂದರು.
ಅಂಬೇಡ್ಕರವರ ಮೂಲಮಂತ್ರ ಹಾಗೂ ಆಶಯಗಳನ್ನು ಎಲ್ಲರೂ ಪಾಲನೆ ಮಾಡಬೇಕು. ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಸಂಘಟಿತರಾಗಬೇಕು. ಅಂಬೇಡ್ಕರ್ ಇಲ್ಲದಿದ್ದರೆ ಶೋಷಿತರಿಗೆ ನ್ಯಾಯ ಸಿಗುತ್ತಿರಲಿಲ್ಲ ಎಂದರು.
ಬಾಬಾ ಸಾಹೇಬ್ ಅವರು ಸುಮಾರು 32 ಪದವಿಗಳನ್ನು ಅಧ್ಯಯನ ಮಾಡಿದ್ದಾರೆ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಎಷ್ಟೇ ಮಾತನಾಡಿದರು ಅದು ಕಡಿಮೆ, ಅವರ ಸಾಧನೆ ಒಂದು ಜನಾಂಗಕ್ಕೆ ಮಾತ್ರ ಸೀಮಿತ ಅಲ್ಲ, ಇಡೀ ಜಗತ್ತಿಗೆ ಅವರು ಮಾಡಿರುವ ಸಾಧನೆ ಅಗಾಧ. ಅವರು ನಡೆದ ದಾರಿಯಲ್ಲಿ ಇಂದಿನ ಯುವ ಜನಾಂಗವು ಸಾಗಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…