Categories: ರಾಜ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು- ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ 850 ವರ್ಷಗಳ ಹಿಂದೆಯೇ ಮೌಢ್ಯಗಳನ್ನು ಬಿಟ್ಟು ವಿಚಾರವಂತಿಕೆ ಬೆಳೆಸಿಕೊಳ್ಳಬೇಕು ಎಂದು ಬಸವಾದಿ ಶರಣರು ಸಾರಿದ್ದರು. ಶಿಕ್ಷಿತರಾದ ಮೇಲೆ ವೈಜ್ಞಾನಿಕವಾಗಿ ಚಿಂತನೆ ಮಾಡುವ ಶಕ್ತಿ ಅಗತ್ಯ. ಉನ್ನತ ಶಿಕ್ಷಣ ಪಡೆದೂ ಕಂದಾಚಾರಗಳಿಗೆ ಜೋತು ಬಿದ್ದರೆ ಅವರನ್ನು ಶಿಕ್ಷಿತರು ಎಂದು ಹೇಳಾಗದು. ಸಮಾಜದ ಜೊತೆಗೆ ಸ್ಪಂದಿಸುವ ಜ್ಞಾನವಿರಬೇಕು. ಆಗ ಮಾತ್ರ ಅವರನ್ನು ಸುಶಿಕ್ಷಿತರು ಎಂದು ಕರೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ವಾಮಿ ವಿವೇಕಾನಂದ ಎಜುಕೇಶನಲ್ ಇನ್‌ಸ್ಟಿಟ್ಯೂಟ್  ವಿದ್ಯಾಸಂಸ್ಥೆಯ ರಜತ ಮಹೋತ್ಸವ ಹಾಗೂ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಬರೀ ಓದು – ಬರೆಯಲು ಮಾತ್ರವಲ್ಲದೆ ಸಾಮಾಜಿಕ ವ್ಯಕ್ತಿಯಾಗಿ ಸಮಾಜದ ಜವಾಬ್ದಾರಿಯನ್ನು ಹೊರುವ, ಸಮಸ್ಯೆಗಳನ್ನು ಪರಿಹಾರ ಮಾಡುವ ಶಕ್ತಿ ವಿದ್ಯಾರ್ಥಿಗಳಿಗೆ ಬರಬೇಕು. ಮಕ್ಕಳಿಗೆ ವೈಚಾರಿಕತೆ ತುಂಬಿ ಬೆಳಸಬೇಕು ಎನ್ನುವುದನ್ನು ಪ್ರತಿಯೊಬ್ಬ ಗುರುಗಳು ಬೆಳೆಸಿಕೊಳ್ಳಬೇಕು. ಶಿಕ್ಷಕರಲ್ಲಿ ವೈಚಾರಿಕತೆ ಬಂದರೆ ಮಕ್ಕಳಿಗೆ ಕೂಡ ಅದು ಬರಲು ಸಾಧ್ಯ. ಕೇವಲ ಇಂಗ್ಲಿಷ್ ನಲ್ಲಿ ಮಾತನಾಡಿದರೆ ಅದು ಶಿಕ್ಷಣವಲ್ಲ ಎಂದರು.

ಗುರುದೇವೋಭವ ಎಂದು ಕರೆಯಲ್ಪಡುವ ಶಿಕ್ಷಕರು, ರೈತರು ಹಾಗೂ ಸೈನಿಕರನ್ನು ಹೆಚ್ಚು ಗೌರವದಿಂದ ಕಾಣುತ್ತೇವೆ. ತಂದೆತಾಯಿಗಳ ಮೇಲೂ ಶಿಕ್ಷಣ ನೀಡುವ ಹೊಣೆಯಿದೆ.  ಇಂಗ್ಲಿಷ್ ಕಲಿಯಬೇಕು, ಆದರೆ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೆಚ್ಚು ಸುಲಭವಾಗಿ ಅರ್ಥವಾಗುತ್ತದೆ ಎಂದು ತಿಳಿಸಿದರು.

ನಮ್ಮ ಕ್ಷೇತ್ರದ ಮಕ್ಕಳು ವಿದ್ಯಾವಂತರಾದರೆ ಅದಕ್ಕಿಂತ ಸಂತೋಷ ಬೇರೆ ಯಾವುದೂ ಇಲ್ಲ. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ಕಡ್ಡಾಯ ಹಾಗೂ ಅದು ಮೂಲ ಭೂತ ಹಕ್ಕಾಗಿದೆ. ನೂರಕ್ಕೆ ನೂರರಷ್ಟು ಮಕ್ಕಳು ವಿದ್ಯಾವಂತರಾಗಬೇಕು. ದೇಶದಲ್ಲಿ ಕೇವಲ 76 % ಮಾತ್ರ ವಿದ್ಯಾವಂತರಿದ್ದಾರೆ . 75 ವರ್ಷಗಳಾದರೂ ಎಲ್ಲರೂ ಶಿಕ್ಷಣ ಪಡೆದಿಲ್ಲ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ಮನೆ ಮನೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ಉಚಿತ ವಿದ್ಯುತ್, 2,000 ಸಾವಿರ ರೂ. 5 ಕೆಜಿ ಹೆಚ್ಚುವರಿ ಅಕ್ಕಿ ಕೊಡುವ ಯೋಜನೆಗಳನ್ನು ಬಡವರಿಗೆ ನೀಡುವುದು ಖರ್ಚು ಮಾಡುವ ಶಕ್ತಿ ಬರಲಿ ಎಂದು. ಸಾರ್ವತ್ರಿಕ ಮೂಲ ಆದಾಯದ ಆಧಾರದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದು ಹೇಳಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago