Categories: ರಾಜ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು- ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ 850 ವರ್ಷಗಳ ಹಿಂದೆಯೇ ಮೌಢ್ಯಗಳನ್ನು ಬಿಟ್ಟು ವಿಚಾರವಂತಿಕೆ ಬೆಳೆಸಿಕೊಳ್ಳಬೇಕು ಎಂದು ಬಸವಾದಿ ಶರಣರು ಸಾರಿದ್ದರು. ಶಿಕ್ಷಿತರಾದ ಮೇಲೆ ವೈಜ್ಞಾನಿಕವಾಗಿ ಚಿಂತನೆ ಮಾಡುವ ಶಕ್ತಿ ಅಗತ್ಯ. ಉನ್ನತ ಶಿಕ್ಷಣ ಪಡೆದೂ ಕಂದಾಚಾರಗಳಿಗೆ ಜೋತು ಬಿದ್ದರೆ ಅವರನ್ನು ಶಿಕ್ಷಿತರು ಎಂದು ಹೇಳಾಗದು. ಸಮಾಜದ ಜೊತೆಗೆ ಸ್ಪಂದಿಸುವ ಜ್ಞಾನವಿರಬೇಕು. ಆಗ ಮಾತ್ರ ಅವರನ್ನು ಸುಶಿಕ್ಷಿತರು ಎಂದು ಕರೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ವಾಮಿ ವಿವೇಕಾನಂದ ಎಜುಕೇಶನಲ್ ಇನ್‌ಸ್ಟಿಟ್ಯೂಟ್  ವಿದ್ಯಾಸಂಸ್ಥೆಯ ರಜತ ಮಹೋತ್ಸವ ಹಾಗೂ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಬರೀ ಓದು – ಬರೆಯಲು ಮಾತ್ರವಲ್ಲದೆ ಸಾಮಾಜಿಕ ವ್ಯಕ್ತಿಯಾಗಿ ಸಮಾಜದ ಜವಾಬ್ದಾರಿಯನ್ನು ಹೊರುವ, ಸಮಸ್ಯೆಗಳನ್ನು ಪರಿಹಾರ ಮಾಡುವ ಶಕ್ತಿ ವಿದ್ಯಾರ್ಥಿಗಳಿಗೆ ಬರಬೇಕು. ಮಕ್ಕಳಿಗೆ ವೈಚಾರಿಕತೆ ತುಂಬಿ ಬೆಳಸಬೇಕು ಎನ್ನುವುದನ್ನು ಪ್ರತಿಯೊಬ್ಬ ಗುರುಗಳು ಬೆಳೆಸಿಕೊಳ್ಳಬೇಕು. ಶಿಕ್ಷಕರಲ್ಲಿ ವೈಚಾರಿಕತೆ ಬಂದರೆ ಮಕ್ಕಳಿಗೆ ಕೂಡ ಅದು ಬರಲು ಸಾಧ್ಯ. ಕೇವಲ ಇಂಗ್ಲಿಷ್ ನಲ್ಲಿ ಮಾತನಾಡಿದರೆ ಅದು ಶಿಕ್ಷಣವಲ್ಲ ಎಂದರು.

ಗುರುದೇವೋಭವ ಎಂದು ಕರೆಯಲ್ಪಡುವ ಶಿಕ್ಷಕರು, ರೈತರು ಹಾಗೂ ಸೈನಿಕರನ್ನು ಹೆಚ್ಚು ಗೌರವದಿಂದ ಕಾಣುತ್ತೇವೆ. ತಂದೆತಾಯಿಗಳ ಮೇಲೂ ಶಿಕ್ಷಣ ನೀಡುವ ಹೊಣೆಯಿದೆ.  ಇಂಗ್ಲಿಷ್ ಕಲಿಯಬೇಕು, ಆದರೆ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೆಚ್ಚು ಸುಲಭವಾಗಿ ಅರ್ಥವಾಗುತ್ತದೆ ಎಂದು ತಿಳಿಸಿದರು.

ನಮ್ಮ ಕ್ಷೇತ್ರದ ಮಕ್ಕಳು ವಿದ್ಯಾವಂತರಾದರೆ ಅದಕ್ಕಿಂತ ಸಂತೋಷ ಬೇರೆ ಯಾವುದೂ ಇಲ್ಲ. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ಕಡ್ಡಾಯ ಹಾಗೂ ಅದು ಮೂಲ ಭೂತ ಹಕ್ಕಾಗಿದೆ. ನೂರಕ್ಕೆ ನೂರರಷ್ಟು ಮಕ್ಕಳು ವಿದ್ಯಾವಂತರಾಗಬೇಕು. ದೇಶದಲ್ಲಿ ಕೇವಲ 76 % ಮಾತ್ರ ವಿದ್ಯಾವಂತರಿದ್ದಾರೆ . 75 ವರ್ಷಗಳಾದರೂ ಎಲ್ಲರೂ ಶಿಕ್ಷಣ ಪಡೆದಿಲ್ಲ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ಮನೆ ಮನೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ಉಚಿತ ವಿದ್ಯುತ್, 2,000 ಸಾವಿರ ರೂ. 5 ಕೆಜಿ ಹೆಚ್ಚುವರಿ ಅಕ್ಕಿ ಕೊಡುವ ಯೋಜನೆಗಳನ್ನು ಬಡವರಿಗೆ ನೀಡುವುದು ಖರ್ಚು ಮಾಡುವ ಶಕ್ತಿ ಬರಲಿ ಎಂದು. ಸಾರ್ವತ್ರಿಕ ಮೂಲ ಆದಾಯದ ಆಧಾರದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದು ಹೇಳಿದರು.

Ramesh Babu

Journalist

Recent Posts

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

2 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

3 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

5 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

6 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

7 hours ago

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

17 hours ago