Categories: ರಾಜ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು- ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ 850 ವರ್ಷಗಳ ಹಿಂದೆಯೇ ಮೌಢ್ಯಗಳನ್ನು ಬಿಟ್ಟು ವಿಚಾರವಂತಿಕೆ ಬೆಳೆಸಿಕೊಳ್ಳಬೇಕು ಎಂದು ಬಸವಾದಿ ಶರಣರು ಸಾರಿದ್ದರು. ಶಿಕ್ಷಿತರಾದ ಮೇಲೆ ವೈಜ್ಞಾನಿಕವಾಗಿ ಚಿಂತನೆ ಮಾಡುವ ಶಕ್ತಿ ಅಗತ್ಯ. ಉನ್ನತ ಶಿಕ್ಷಣ ಪಡೆದೂ ಕಂದಾಚಾರಗಳಿಗೆ ಜೋತು ಬಿದ್ದರೆ ಅವರನ್ನು ಶಿಕ್ಷಿತರು ಎಂದು ಹೇಳಾಗದು. ಸಮಾಜದ ಜೊತೆಗೆ ಸ್ಪಂದಿಸುವ ಜ್ಞಾನವಿರಬೇಕು. ಆಗ ಮಾತ್ರ ಅವರನ್ನು ಸುಶಿಕ್ಷಿತರು ಎಂದು ಕರೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ವಾಮಿ ವಿವೇಕಾನಂದ ಎಜುಕೇಶನಲ್ ಇನ್‌ಸ್ಟಿಟ್ಯೂಟ್  ವಿದ್ಯಾಸಂಸ್ಥೆಯ ರಜತ ಮಹೋತ್ಸವ ಹಾಗೂ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಬರೀ ಓದು – ಬರೆಯಲು ಮಾತ್ರವಲ್ಲದೆ ಸಾಮಾಜಿಕ ವ್ಯಕ್ತಿಯಾಗಿ ಸಮಾಜದ ಜವಾಬ್ದಾರಿಯನ್ನು ಹೊರುವ, ಸಮಸ್ಯೆಗಳನ್ನು ಪರಿಹಾರ ಮಾಡುವ ಶಕ್ತಿ ವಿದ್ಯಾರ್ಥಿಗಳಿಗೆ ಬರಬೇಕು. ಮಕ್ಕಳಿಗೆ ವೈಚಾರಿಕತೆ ತುಂಬಿ ಬೆಳಸಬೇಕು ಎನ್ನುವುದನ್ನು ಪ್ರತಿಯೊಬ್ಬ ಗುರುಗಳು ಬೆಳೆಸಿಕೊಳ್ಳಬೇಕು. ಶಿಕ್ಷಕರಲ್ಲಿ ವೈಚಾರಿಕತೆ ಬಂದರೆ ಮಕ್ಕಳಿಗೆ ಕೂಡ ಅದು ಬರಲು ಸಾಧ್ಯ. ಕೇವಲ ಇಂಗ್ಲಿಷ್ ನಲ್ಲಿ ಮಾತನಾಡಿದರೆ ಅದು ಶಿಕ್ಷಣವಲ್ಲ ಎಂದರು.

ಗುರುದೇವೋಭವ ಎಂದು ಕರೆಯಲ್ಪಡುವ ಶಿಕ್ಷಕರು, ರೈತರು ಹಾಗೂ ಸೈನಿಕರನ್ನು ಹೆಚ್ಚು ಗೌರವದಿಂದ ಕಾಣುತ್ತೇವೆ. ತಂದೆತಾಯಿಗಳ ಮೇಲೂ ಶಿಕ್ಷಣ ನೀಡುವ ಹೊಣೆಯಿದೆ.  ಇಂಗ್ಲಿಷ್ ಕಲಿಯಬೇಕು, ಆದರೆ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೆಚ್ಚು ಸುಲಭವಾಗಿ ಅರ್ಥವಾಗುತ್ತದೆ ಎಂದು ತಿಳಿಸಿದರು.

ನಮ್ಮ ಕ್ಷೇತ್ರದ ಮಕ್ಕಳು ವಿದ್ಯಾವಂತರಾದರೆ ಅದಕ್ಕಿಂತ ಸಂತೋಷ ಬೇರೆ ಯಾವುದೂ ಇಲ್ಲ. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ಕಡ್ಡಾಯ ಹಾಗೂ ಅದು ಮೂಲ ಭೂತ ಹಕ್ಕಾಗಿದೆ. ನೂರಕ್ಕೆ ನೂರರಷ್ಟು ಮಕ್ಕಳು ವಿದ್ಯಾವಂತರಾಗಬೇಕು. ದೇಶದಲ್ಲಿ ಕೇವಲ 76 % ಮಾತ್ರ ವಿದ್ಯಾವಂತರಿದ್ದಾರೆ . 75 ವರ್ಷಗಳಾದರೂ ಎಲ್ಲರೂ ಶಿಕ್ಷಣ ಪಡೆದಿಲ್ಲ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ಮನೆ ಮನೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ಉಚಿತ ವಿದ್ಯುತ್, 2,000 ಸಾವಿರ ರೂ. 5 ಕೆಜಿ ಹೆಚ್ಚುವರಿ ಅಕ್ಕಿ ಕೊಡುವ ಯೋಜನೆಗಳನ್ನು ಬಡವರಿಗೆ ನೀಡುವುದು ಖರ್ಚು ಮಾಡುವ ಶಕ್ತಿ ಬರಲಿ ಎಂದು. ಸಾರ್ವತ್ರಿಕ ಮೂಲ ಆದಾಯದ ಆಧಾರದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದು ಹೇಳಿದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

8 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago