Categories: ರಾಜ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು- ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ 850 ವರ್ಷಗಳ ಹಿಂದೆಯೇ ಮೌಢ್ಯಗಳನ್ನು ಬಿಟ್ಟು ವಿಚಾರವಂತಿಕೆ ಬೆಳೆಸಿಕೊಳ್ಳಬೇಕು ಎಂದು ಬಸವಾದಿ ಶರಣರು ಸಾರಿದ್ದರು. ಶಿಕ್ಷಿತರಾದ ಮೇಲೆ ವೈಜ್ಞಾನಿಕವಾಗಿ ಚಿಂತನೆ ಮಾಡುವ ಶಕ್ತಿ ಅಗತ್ಯ. ಉನ್ನತ ಶಿಕ್ಷಣ ಪಡೆದೂ ಕಂದಾಚಾರಗಳಿಗೆ ಜೋತು ಬಿದ್ದರೆ ಅವರನ್ನು ಶಿಕ್ಷಿತರು ಎಂದು ಹೇಳಾಗದು. ಸಮಾಜದ ಜೊತೆಗೆ ಸ್ಪಂದಿಸುವ ಜ್ಞಾನವಿರಬೇಕು. ಆಗ ಮಾತ್ರ ಅವರನ್ನು ಸುಶಿಕ್ಷಿತರು ಎಂದು ಕರೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸ್ವಾಮಿ ವಿವೇಕಾನಂದ ಎಜುಕೇಶನಲ್ ಇನ್‌ಸ್ಟಿಟ್ಯೂಟ್  ವಿದ್ಯಾಸಂಸ್ಥೆಯ ರಜತ ಮಹೋತ್ಸವ ಹಾಗೂ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಬರೀ ಓದು – ಬರೆಯಲು ಮಾತ್ರವಲ್ಲದೆ ಸಾಮಾಜಿಕ ವ್ಯಕ್ತಿಯಾಗಿ ಸಮಾಜದ ಜವಾಬ್ದಾರಿಯನ್ನು ಹೊರುವ, ಸಮಸ್ಯೆಗಳನ್ನು ಪರಿಹಾರ ಮಾಡುವ ಶಕ್ತಿ ವಿದ್ಯಾರ್ಥಿಗಳಿಗೆ ಬರಬೇಕು. ಮಕ್ಕಳಿಗೆ ವೈಚಾರಿಕತೆ ತುಂಬಿ ಬೆಳಸಬೇಕು ಎನ್ನುವುದನ್ನು ಪ್ರತಿಯೊಬ್ಬ ಗುರುಗಳು ಬೆಳೆಸಿಕೊಳ್ಳಬೇಕು. ಶಿಕ್ಷಕರಲ್ಲಿ ವೈಚಾರಿಕತೆ ಬಂದರೆ ಮಕ್ಕಳಿಗೆ ಕೂಡ ಅದು ಬರಲು ಸಾಧ್ಯ. ಕೇವಲ ಇಂಗ್ಲಿಷ್ ನಲ್ಲಿ ಮಾತನಾಡಿದರೆ ಅದು ಶಿಕ್ಷಣವಲ್ಲ ಎಂದರು.

ಗುರುದೇವೋಭವ ಎಂದು ಕರೆಯಲ್ಪಡುವ ಶಿಕ್ಷಕರು, ರೈತರು ಹಾಗೂ ಸೈನಿಕರನ್ನು ಹೆಚ್ಚು ಗೌರವದಿಂದ ಕಾಣುತ್ತೇವೆ. ತಂದೆತಾಯಿಗಳ ಮೇಲೂ ಶಿಕ್ಷಣ ನೀಡುವ ಹೊಣೆಯಿದೆ.  ಇಂಗ್ಲಿಷ್ ಕಲಿಯಬೇಕು, ಆದರೆ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೆಚ್ಚು ಸುಲಭವಾಗಿ ಅರ್ಥವಾಗುತ್ತದೆ ಎಂದು ತಿಳಿಸಿದರು.

ನಮ್ಮ ಕ್ಷೇತ್ರದ ಮಕ್ಕಳು ವಿದ್ಯಾವಂತರಾದರೆ ಅದಕ್ಕಿಂತ ಸಂತೋಷ ಬೇರೆ ಯಾವುದೂ ಇಲ್ಲ. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ಕಡ್ಡಾಯ ಹಾಗೂ ಅದು ಮೂಲ ಭೂತ ಹಕ್ಕಾಗಿದೆ. ನೂರಕ್ಕೆ ನೂರರಷ್ಟು ಮಕ್ಕಳು ವಿದ್ಯಾವಂತರಾಗಬೇಕು. ದೇಶದಲ್ಲಿ ಕೇವಲ 76 % ಮಾತ್ರ ವಿದ್ಯಾವಂತರಿದ್ದಾರೆ . 75 ವರ್ಷಗಳಾದರೂ ಎಲ್ಲರೂ ಶಿಕ್ಷಣ ಪಡೆದಿಲ್ಲ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ಮನೆ ಮನೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ಉಚಿತ ವಿದ್ಯುತ್, 2,000 ಸಾವಿರ ರೂ. 5 ಕೆಜಿ ಹೆಚ್ಚುವರಿ ಅಕ್ಕಿ ಕೊಡುವ ಯೋಜನೆಗಳನ್ನು ಬಡವರಿಗೆ ನೀಡುವುದು ಖರ್ಚು ಮಾಡುವ ಶಕ್ತಿ ಬರಲಿ ಎಂದು. ಸಾರ್ವತ್ರಿಕ ಮೂಲ ಆದಾಯದ ಆಧಾರದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದು ಹೇಳಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

8 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

8 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

11 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago