ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು- ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್

ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು.

ಕನ್ನಡಿಗರ ಅವಿರತ ಹೋರಾಟದ ಫಲ‌ವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಯಿತು. ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಕನ್ನಡಿಗರ  ಅಭಿಮಾನ ಹೊಂದಬೇಕಾಗಿದೆ. ಕನ್ನಡಿಗರಿಗೆ    ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ರಾಜ್ಯದ ಶಾಲಾ ಕಾಲೇಜು, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಬೇಕಾಗಿದೆ. ಕುವೆಂಪು ಅವರು 1924-25ರಲ್ಲಿ ‘ಕನ್ನಡ ರಾಷ್ಟ್ರಗೀತೆ’ ಎಂದು ನಾಡಗೀತೆಯನ್ನು ಬರೆದಿದ್ದರು. 2004 ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತವಾಗಿ ನಾಡಗೀತೆ ಮನ್ನಣೆ ನೀಡಿತು. ನಮ್ಮ ನಾಡಗೀತೆಯಲ್ಲಿ ಭಾರತ ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಮೂಲಕ ವಿವಿಧ ಸಮುದಾಯಗಳು ಒಟ್ಟಾಗಿ ಬಾಳುತ್ತಿವೆ ಎಂದು ಕುವೆಂಪು ಸಾರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತು ವಿವಿಧ ಸಂಘಟನೆಗಳ  ಪದಾಧಿಕಾರಿಗಳಾದ ಪಿ.ಗೋವಿಂದರಾಜು, ಎ.ಜಯರಾಮ್, ಆರ್.ಗೋವಿಂದರಾಜು, ದಾದಾಪೀರ್, ಜಿ.ಸುರೇಶ್, ವಿ.ಎಸ್.ಹೆಗಡೆ, ಕುಮಾರ್, ಉದಯಾರಾಧ್ಯ, ವೆಂಕಟರಾಜು, ಡಿ.ಶ್ರೀಕಾಂತ್, ಜಿ.ಎಂ.ನಾಗರಾಜ್, ಅಣ್ಣಯ್ಯ, ವತ್ಸಲಾ, ವೆಂಕಟೇಶರೆಡ್ಡಿ, ಗುರುರಾಜಪ್ಪ, ಎಂ.ಸಿ.ಮಂಜುನಾಥ್, ಕೋದಂಡರಾಮ್, ಮುನಿರಾಜು, ಸಫೀರ್,  ನಾಗರತ್ನಮ್ಮ, ದರ್ಗಾಜೋಗಿಹಳ್ಳಿ ಮಲ್ಲೇಶ್, ನಾಗದಳ ನಟರಾಜ್, ರಹೀಮ್, ಮಹಾದೇವಪ್ಪ, ರಂಗಸ್ವಾಮಯ್ಯ  ಭಾಗವಹಿಸಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

13 minutes ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

1 hour ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

1 hour ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

5 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

16 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

17 hours ago