ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು- ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್

ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು.

ಕನ್ನಡಿಗರ ಅವಿರತ ಹೋರಾಟದ ಫಲ‌ವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಯಿತು. ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಕನ್ನಡಿಗರ  ಅಭಿಮಾನ ಹೊಂದಬೇಕಾಗಿದೆ. ಕನ್ನಡಿಗರಿಗೆ    ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ರಾಜ್ಯದ ಶಾಲಾ ಕಾಲೇಜು, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಬೇಕಾಗಿದೆ. ಕುವೆಂಪು ಅವರು 1924-25ರಲ್ಲಿ ‘ಕನ್ನಡ ರಾಷ್ಟ್ರಗೀತೆ’ ಎಂದು ನಾಡಗೀತೆಯನ್ನು ಬರೆದಿದ್ದರು. 2004 ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತವಾಗಿ ನಾಡಗೀತೆ ಮನ್ನಣೆ ನೀಡಿತು. ನಮ್ಮ ನಾಡಗೀತೆಯಲ್ಲಿ ಭಾರತ ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಮೂಲಕ ವಿವಿಧ ಸಮುದಾಯಗಳು ಒಟ್ಟಾಗಿ ಬಾಳುತ್ತಿವೆ ಎಂದು ಕುವೆಂಪು ಸಾರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತು ವಿವಿಧ ಸಂಘಟನೆಗಳ  ಪದಾಧಿಕಾರಿಗಳಾದ ಪಿ.ಗೋವಿಂದರಾಜು, ಎ.ಜಯರಾಮ್, ಆರ್.ಗೋವಿಂದರಾಜು, ದಾದಾಪೀರ್, ಜಿ.ಸುರೇಶ್, ವಿ.ಎಸ್.ಹೆಗಡೆ, ಕುಮಾರ್, ಉದಯಾರಾಧ್ಯ, ವೆಂಕಟರಾಜು, ಡಿ.ಶ್ರೀಕಾಂತ್, ಜಿ.ಎಂ.ನಾಗರಾಜ್, ಅಣ್ಣಯ್ಯ, ವತ್ಸಲಾ, ವೆಂಕಟೇಶರೆಡ್ಡಿ, ಗುರುರಾಜಪ್ಪ, ಎಂ.ಸಿ.ಮಂಜುನಾಥ್, ಕೋದಂಡರಾಮ್, ಮುನಿರಾಜು, ಸಫೀರ್,  ನಾಗರತ್ನಮ್ಮ, ದರ್ಗಾಜೋಗಿಹಳ್ಳಿ ಮಲ್ಲೇಶ್, ನಾಗದಳ ನಟರಾಜ್, ರಹೀಮ್, ಮಹಾದೇವಪ್ಪ, ರಂಗಸ್ವಾಮಯ್ಯ  ಭಾಗವಹಿಸಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

12 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago