ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು- ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್

ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು.

ಕನ್ನಡಿಗರ ಅವಿರತ ಹೋರಾಟದ ಫಲ‌ವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಯಿತು. ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಕನ್ನಡಿಗರ  ಅಭಿಮಾನ ಹೊಂದಬೇಕಾಗಿದೆ. ಕನ್ನಡಿಗರಿಗೆ    ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು ರಾಜ್ಯದ ಶಾಲಾ ಕಾಲೇಜು, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಬೇಕಾಗಿದೆ. ಕುವೆಂಪು ಅವರು 1924-25ರಲ್ಲಿ ‘ಕನ್ನಡ ರಾಷ್ಟ್ರಗೀತೆ’ ಎಂದು ನಾಡಗೀತೆಯನ್ನು ಬರೆದಿದ್ದರು. 2004 ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತವಾಗಿ ನಾಡಗೀತೆ ಮನ್ನಣೆ ನೀಡಿತು. ನಮ್ಮ ನಾಡಗೀತೆಯಲ್ಲಿ ಭಾರತ ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಮೂಲಕ ವಿವಿಧ ಸಮುದಾಯಗಳು ಒಟ್ಟಾಗಿ ಬಾಳುತ್ತಿವೆ ಎಂದು ಕುವೆಂಪು ಸಾರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತು ವಿವಿಧ ಸಂಘಟನೆಗಳ  ಪದಾಧಿಕಾರಿಗಳಾದ ಪಿ.ಗೋವಿಂದರಾಜು, ಎ.ಜಯರಾಮ್, ಆರ್.ಗೋವಿಂದರಾಜು, ದಾದಾಪೀರ್, ಜಿ.ಸುರೇಶ್, ವಿ.ಎಸ್.ಹೆಗಡೆ, ಕುಮಾರ್, ಉದಯಾರಾಧ್ಯ, ವೆಂಕಟರಾಜು, ಡಿ.ಶ್ರೀಕಾಂತ್, ಜಿ.ಎಂ.ನಾಗರಾಜ್, ಅಣ್ಣಯ್ಯ, ವತ್ಸಲಾ, ವೆಂಕಟೇಶರೆಡ್ಡಿ, ಗುರುರಾಜಪ್ಪ, ಎಂ.ಸಿ.ಮಂಜುನಾಥ್, ಕೋದಂಡರಾಮ್, ಮುನಿರಾಜು, ಸಫೀರ್,  ನಾಗರತ್ನಮ್ಮ, ದರ್ಗಾಜೋಗಿಹಳ್ಳಿ ಮಲ್ಲೇಶ್, ನಾಗದಳ ನಟರಾಜ್, ರಹೀಮ್, ಮಹಾದೇವಪ್ಪ, ರಂಗಸ್ವಾಮಯ್ಯ  ಭಾಗವಹಿಸಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

2 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago