ಪ್ರತಿಯೊಬ್ಬ ಕನ್ನಡಿಗ ಕನ್ನಡ ಪ್ರಜ್ಞೆಯನ್ನು ಸದಾ ಉಳಿಸಿ, ಬೆಳೆಸಿಕೊಳ್ಳಬೇಕು- ಕವಯತ್ರಿ ಎಂ.ಬಿ.ಯಶೋಧಮ್ಮ

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡದ ಪರಂಪರೆಯನ್ನು ಮತ್ತು ಅನನ್ಯತೆಯನ್ನು   ಉಳಿಸಿ, ಬೆಳೆಸುವ ಜವಾಬ್ದಾರಿಯನ್ನು ಕನ್ನಡಿಗರು  ಸಮರ್ಥವಾಗಿ ನಿರ್ವಹಿಸಬೇಕಾಗಿದೆ ಎಂದು ಕವಯತ್ರಿ ಎಂ.ಬಿ.ಯಶೋಧಮ್ಮ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬ ಕನ್ನಡಿಗ ಕನ್ನಡ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ಮತ್ತು ಸೃಜನಶೀಲತೆ ಉಳಿಯಬೇಕಾದರೆ ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರೆ ಕನ್ನಡ ಎಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದರು.

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ.  ಕನ್ನಡ ಭಾಷೆಯಲ್ಲಿ ಮಹತ್ವದ ಸಾಹಿತ್ಯ ಕೃತಿಗಳನ್ನು ಕವಿಗಳು ರಚಿಸಿದ್ದಾರೆ. ವಿಶ್ವಮಾನ್ಯವಾದ ಸಾಹಿತ್ಯ ರಚನೆ ಕನ್ನಡದಲ್ಲಿ ಆಗಿದೆ. ಕನ್ನಡ ಪರಂಪರೆಯನ್ನು ಅಧ್ಯಯನ ಮಾಡಿದವರಿಗೆ ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆ ಅರಿವಾಗುತ್ತದೆ.  ಜಗತ್ತಿನ ಪ್ರಮುಖ ಭಾಷೆಗಳ ಸಾಲಿನಲ್ಲಿ ಕನ್ನಡಕ್ಕೆ ಮಹತ್ವದ ಸ್ಥಾನವಿದೆ. ಇಂತಹ ಕನ್ನಡ ಭಾಷೆಯನ್ನು ಬಳಸುತ್ತಾ, ಕನ್ನಡ ಪುಸ್ತಕಗಳನ್ನು ಓದುವ ಮೂಲಕ ಕನ್ನಡ ಉಳಿಸಬೇಕಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಪಾತ್ರವಹಿಸಿತ್ತು. ಕರ್ನಾಟಕ ಏಕೀಕರಣ ಚಳುವಳಿ ಕನ್ನಡ ಮಾತನಾಡುವವರನ್ನು  ಒಗ್ಗೂಡಿಸಿ ಮೈಸೂರು ರಾಜ್ಯವಾಗಿಸಿತು. ನಂತರ ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡಿತು.  ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮವನ್ನು ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮಗಳು ನಡೆಯುತ್ತಿವೆ. ಕನ್ನಡವನ್ನು ಕಟ್ಟುವ ಕೆಲಸ ನಿರಂತರ ನಡೆಯಬೇಕಾಗಿದೆ. ಕನ್ನಡ ಭಾಷೆಯನ್ನು ಕರ್ನಾಟಕದಲ್ಲಿ ಶಿಕ್ಷಣ, ಆಡಳಿತ, ಸಾಂಸ್ಕೃತಿಕ ಸೇರಿದಂತೆ ಎಲ್ಲಾ ವಲಯಗಳಲ್ಲಿ ಉಳಿಸಬೇಕು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಹಿತಿಗಳು ಮತ್ತು ಕಲಾವಿದರ ಕೊಡುಗೆ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ. ವೆಂಕಟರಾಜು, ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷೆ ಪದ್ಮಾವತಿ, ಸಂಗೀತ ಶಿಕ್ಷಕಿ ಮೀರಾಬಾಯಿ, ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ಸಂಗೀತ, ನೃತ್ಯ ಮತ್ತು ಯೋಗ ಕಲಿಕಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಯೋಗ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

1 hour ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

4 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

15 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

17 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

17 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago