ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡದ ಪರಂಪರೆಯನ್ನು ಮತ್ತು ಅನನ್ಯತೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿಯನ್ನು ಕನ್ನಡಿಗರು ಸಮರ್ಥವಾಗಿ ನಿರ್ವಹಿಸಬೇಕಾಗಿದೆ ಎಂದು ಕವಯತ್ರಿ ಎಂ.ಬಿ.ಯಶೋಧಮ್ಮ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬ ಕನ್ನಡಿಗ ಕನ್ನಡ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ಮತ್ತು ಸೃಜನಶೀಲತೆ ಉಳಿಯಬೇಕಾದರೆ ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರೆ ಕನ್ನಡ ಎಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದರು.
ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಕನ್ನಡ ಭಾಷೆಯಲ್ಲಿ ಮಹತ್ವದ ಸಾಹಿತ್ಯ ಕೃತಿಗಳನ್ನು ಕವಿಗಳು ರಚಿಸಿದ್ದಾರೆ. ವಿಶ್ವಮಾನ್ಯವಾದ ಸಾಹಿತ್ಯ ರಚನೆ ಕನ್ನಡದಲ್ಲಿ ಆಗಿದೆ. ಕನ್ನಡ ಪರಂಪರೆಯನ್ನು ಅಧ್ಯಯನ ಮಾಡಿದವರಿಗೆ ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆ ಅರಿವಾಗುತ್ತದೆ. ಜಗತ್ತಿನ ಪ್ರಮುಖ ಭಾಷೆಗಳ ಸಾಲಿನಲ್ಲಿ ಕನ್ನಡಕ್ಕೆ ಮಹತ್ವದ ಸ್ಥಾನವಿದೆ. ಇಂತಹ ಕನ್ನಡ ಭಾಷೆಯನ್ನು ಬಳಸುತ್ತಾ, ಕನ್ನಡ ಪುಸ್ತಕಗಳನ್ನು ಓದುವ ಮೂಲಕ ಕನ್ನಡ ಉಳಿಸಬೇಕಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಪಾತ್ರವಹಿಸಿತ್ತು. ಕರ್ನಾಟಕ ಏಕೀಕರಣ ಚಳುವಳಿ ಕನ್ನಡ ಮಾತನಾಡುವವರನ್ನು ಒಗ್ಗೂಡಿಸಿ ಮೈಸೂರು ರಾಜ್ಯವಾಗಿಸಿತು. ನಂತರ ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡಿತು. ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮವನ್ನು ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮಗಳು ನಡೆಯುತ್ತಿವೆ. ಕನ್ನಡವನ್ನು ಕಟ್ಟುವ ಕೆಲಸ ನಿರಂತರ ನಡೆಯಬೇಕಾಗಿದೆ. ಕನ್ನಡ ಭಾಷೆಯನ್ನು ಕರ್ನಾಟಕದಲ್ಲಿ ಶಿಕ್ಷಣ, ಆಡಳಿತ, ಸಾಂಸ್ಕೃತಿಕ ಸೇರಿದಂತೆ ಎಲ್ಲಾ ವಲಯಗಳಲ್ಲಿ ಉಳಿಸಬೇಕು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಹಿತಿಗಳು ಮತ್ತು ಕಲಾವಿದರ ಕೊಡುಗೆ ಅಪಾರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ. ವೆಂಕಟರಾಜು, ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷೆ ಪದ್ಮಾವತಿ, ಸಂಗೀತ ಶಿಕ್ಷಕಿ ಮೀರಾಬಾಯಿ, ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ಸಂಗೀತ, ನೃತ್ಯ ಮತ್ತು ಯೋಗ ಕಲಿಕಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಯೋಗ ಪ್ರದರ್ಶನ ನಡೆಯಿತು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…