ಪ್ರತಿಯೊಬ್ಬ ಕನ್ನಡಿಗ ಕನ್ನಡ ಪ್ರಜ್ಞೆಯನ್ನು ಸದಾ ಉಳಿಸಿ, ಬೆಳೆಸಿಕೊಳ್ಳಬೇಕು- ಕವಯತ್ರಿ ಎಂ.ಬಿ.ಯಶೋಧಮ್ಮ

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡದ ಪರಂಪರೆಯನ್ನು ಮತ್ತು ಅನನ್ಯತೆಯನ್ನು   ಉಳಿಸಿ, ಬೆಳೆಸುವ ಜವಾಬ್ದಾರಿಯನ್ನು ಕನ್ನಡಿಗರು  ಸಮರ್ಥವಾಗಿ ನಿರ್ವಹಿಸಬೇಕಾಗಿದೆ ಎಂದು ಕವಯತ್ರಿ ಎಂ.ಬಿ.ಯಶೋಧಮ್ಮ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬ ಕನ್ನಡಿಗ ಕನ್ನಡ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ಮತ್ತು ಸೃಜನಶೀಲತೆ ಉಳಿಯಬೇಕಾದರೆ ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರೆ ಕನ್ನಡ ಎಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದರು.

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ.  ಕನ್ನಡ ಭಾಷೆಯಲ್ಲಿ ಮಹತ್ವದ ಸಾಹಿತ್ಯ ಕೃತಿಗಳನ್ನು ಕವಿಗಳು ರಚಿಸಿದ್ದಾರೆ. ವಿಶ್ವಮಾನ್ಯವಾದ ಸಾಹಿತ್ಯ ರಚನೆ ಕನ್ನಡದಲ್ಲಿ ಆಗಿದೆ. ಕನ್ನಡ ಪರಂಪರೆಯನ್ನು ಅಧ್ಯಯನ ಮಾಡಿದವರಿಗೆ ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆ ಅರಿವಾಗುತ್ತದೆ.  ಜಗತ್ತಿನ ಪ್ರಮುಖ ಭಾಷೆಗಳ ಸಾಲಿನಲ್ಲಿ ಕನ್ನಡಕ್ಕೆ ಮಹತ್ವದ ಸ್ಥಾನವಿದೆ. ಇಂತಹ ಕನ್ನಡ ಭಾಷೆಯನ್ನು ಬಳಸುತ್ತಾ, ಕನ್ನಡ ಪುಸ್ತಕಗಳನ್ನು ಓದುವ ಮೂಲಕ ಕನ್ನಡ ಉಳಿಸಬೇಕಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಪಾತ್ರವಹಿಸಿತ್ತು. ಕರ್ನಾಟಕ ಏಕೀಕರಣ ಚಳುವಳಿ ಕನ್ನಡ ಮಾತನಾಡುವವರನ್ನು  ಒಗ್ಗೂಡಿಸಿ ಮೈಸೂರು ರಾಜ್ಯವಾಗಿಸಿತು. ನಂತರ ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡಿತು.  ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮವನ್ನು ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮಗಳು ನಡೆಯುತ್ತಿವೆ. ಕನ್ನಡವನ್ನು ಕಟ್ಟುವ ಕೆಲಸ ನಿರಂತರ ನಡೆಯಬೇಕಾಗಿದೆ. ಕನ್ನಡ ಭಾಷೆಯನ್ನು ಕರ್ನಾಟಕದಲ್ಲಿ ಶಿಕ್ಷಣ, ಆಡಳಿತ, ಸಾಂಸ್ಕೃತಿಕ ಸೇರಿದಂತೆ ಎಲ್ಲಾ ವಲಯಗಳಲ್ಲಿ ಉಳಿಸಬೇಕು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಹಿತಿಗಳು ಮತ್ತು ಕಲಾವಿದರ ಕೊಡುಗೆ ಅಪಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ. ವೆಂಕಟರಾಜು, ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷೆ ಪದ್ಮಾವತಿ, ಸಂಗೀತ ಶಿಕ್ಷಕಿ ಮೀರಾಬಾಯಿ, ನವ್ಯಶ್ರೀ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ಸಂಗೀತ, ನೃತ್ಯ ಮತ್ತು ಯೋಗ ಕಲಿಕಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಯೋಗ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

9 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

21 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

22 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago