ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು- ನೂತನ ಅಧ್ಯಕ್ಷ ರಾಜು ಬೆಳವಂಗಲ

ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆರ್ ಟಿ‌ ಐ ಕುರಿತು ತರಬೇತಿ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಹೆಜ್ಜಾಜಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ತಾಲೂಕು ಘಟಕವನ್ನ ಸಹ ಉದ್ಘಾಟನೆ ಮಾಡಿ, ರಾಜು ಬೆಳವಂಗಲ ಅವರನ್ನ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು. ಪ್ರಶ್ನೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಹೋಗಿ ತಮ್ಮ ಹಕ್ಕುಗಳನ್ನ ಕೇಳಿ ಪಡೆಯಂತಹ ಧೈರ್ಯ ನಮ್ಮಲ್ಲಿರಬೇಕು ಎಂದು ತಾಲೂಕು ಘಟಕದ ನೂತನ ಅಧ್ಯಕ್ಷ ರಾಜು ಬೆಳವಂಗಲ ಅವರು ಹೇಳಿದರು.

ಯಾವುದೇ ಸಂದರ್ಭದಲ್ಲಿ ಮಾನವನ ಹಕ್ಕುಗಳು ಉಲಂಘನೆ ಆದರೆ ಮಾನವನ ಹಕ್ಕುಗಳು ಹಾಗೂ ಭ್ರಷ್ಟಾಚಾರ ಸಂಸ್ಥೆಯು ಕಂಡಿತ ಸಾಮಾಜಿಕ ನ್ಯಾಯ ವದಗಿಸಿಕೊಡುವಂತಹ ಕೆಲಸ ಮಾಡುತ್ತದೆ ಎಂದಯ ಭರವಸೆ ನೀಡಿದ ರಾಜ್ಯ ಅಧ್ಯಕ್ಷ ಎಸ್.ರಾಘವೇಂದ್ರ ಹೇಳಿದರು.

ಯಾವುದೇ ಕುಂದುಕೊರತೆ ಇದ್ದಲ್ಲಿ ಆಹೋರಾತ್ರಿಯಲ್ಲಾದರು ಸಾಮಾಜಿಕ ನ್ಯಾಯಕ್ಕಾಗಿ ಸ್ಪಂದಿಸುತ್ತೇನೆ ಎಂದು ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಡಿ.ಆರ್.ಮಾರುತಿ ಹೇಳಿದರು.

ಈ ವೇಳೆ ರಾಜ್ಯ ಗೌರವ ಅಧ್ಯಕ್ಷರಾದ ಹನುಮಂತರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಸರ್ವೇಶ್ ಕುಮಾರ್, ಆರ್ ಟಿ ಐ ವಿಭಾಗದ ಮುಖ್ಯ ಸಲಹೆಗಾರ ರಾಮಲಿಂಗೇಗೌಡ, ಆರ್ ಟಿ ಐ ವಿಭಾಗದ ರಾಜ್ಯ ಸಹ ಸಂಚಾಲಕರು ಅಪ್ಪಾಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

3 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

12 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

16 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago