ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು- ನೂತನ ಅಧ್ಯಕ್ಷ ರಾಜು ಬೆಳವಂಗಲ

ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆರ್ ಟಿ‌ ಐ ಕುರಿತು ತರಬೇತಿ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಹೆಜ್ಜಾಜಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ತಾಲೂಕು ಘಟಕವನ್ನ ಸಹ ಉದ್ಘಾಟನೆ ಮಾಡಿ, ರಾಜು ಬೆಳವಂಗಲ ಅವರನ್ನ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು. ಪ್ರಶ್ನೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಹೋಗಿ ತಮ್ಮ ಹಕ್ಕುಗಳನ್ನ ಕೇಳಿ ಪಡೆಯಂತಹ ಧೈರ್ಯ ನಮ್ಮಲ್ಲಿರಬೇಕು ಎಂದು ತಾಲೂಕು ಘಟಕದ ನೂತನ ಅಧ್ಯಕ್ಷ ರಾಜು ಬೆಳವಂಗಲ ಅವರು ಹೇಳಿದರು.

ಯಾವುದೇ ಸಂದರ್ಭದಲ್ಲಿ ಮಾನವನ ಹಕ್ಕುಗಳು ಉಲಂಘನೆ ಆದರೆ ಮಾನವನ ಹಕ್ಕುಗಳು ಹಾಗೂ ಭ್ರಷ್ಟಾಚಾರ ಸಂಸ್ಥೆಯು ಕಂಡಿತ ಸಾಮಾಜಿಕ ನ್ಯಾಯ ವದಗಿಸಿಕೊಡುವಂತಹ ಕೆಲಸ ಮಾಡುತ್ತದೆ ಎಂದಯ ಭರವಸೆ ನೀಡಿದ ರಾಜ್ಯ ಅಧ್ಯಕ್ಷ ಎಸ್.ರಾಘವೇಂದ್ರ ಹೇಳಿದರು.

ಯಾವುದೇ ಕುಂದುಕೊರತೆ ಇದ್ದಲ್ಲಿ ಆಹೋರಾತ್ರಿಯಲ್ಲಾದರು ಸಾಮಾಜಿಕ ನ್ಯಾಯಕ್ಕಾಗಿ ಸ್ಪಂದಿಸುತ್ತೇನೆ ಎಂದು ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಡಿ.ಆರ್.ಮಾರುತಿ ಹೇಳಿದರು.

ಈ ವೇಳೆ ರಾಜ್ಯ ಗೌರವ ಅಧ್ಯಕ್ಷರಾದ ಹನುಮಂತರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಸರ್ವೇಶ್ ಕುಮಾರ್, ಆರ್ ಟಿ ಐ ವಿಭಾಗದ ಮುಖ್ಯ ಸಲಹೆಗಾರ ರಾಮಲಿಂಗೇಗೌಡ, ಆರ್ ಟಿ ಐ ವಿಭಾಗದ ರಾಜ್ಯ ಸಹ ಸಂಚಾಲಕರು ಅಪ್ಪಾಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

2 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

5 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

20 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

24 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago