ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆರ್ ಟಿ ಐ ಕುರಿತು ತರಬೇತಿ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಹೆಜ್ಜಾಜಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ತಾಲೂಕು ಘಟಕವನ್ನ ಸಹ ಉದ್ಘಾಟನೆ ಮಾಡಿ, ರಾಜು ಬೆಳವಂಗಲ ಅವರನ್ನ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು. ಪ್ರಶ್ನೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಹೋಗಿ ತಮ್ಮ ಹಕ್ಕುಗಳನ್ನ ಕೇಳಿ ಪಡೆಯಂತಹ ಧೈರ್ಯ ನಮ್ಮಲ್ಲಿರಬೇಕು ಎಂದು ತಾಲೂಕು ಘಟಕದ ನೂತನ ಅಧ್ಯಕ್ಷ ರಾಜು ಬೆಳವಂಗಲ ಅವರು ಹೇಳಿದರು.
ಯಾವುದೇ ಸಂದರ್ಭದಲ್ಲಿ ಮಾನವನ ಹಕ್ಕುಗಳು ಉಲಂಘನೆ ಆದರೆ ಮಾನವನ ಹಕ್ಕುಗಳು ಹಾಗೂ ಭ್ರಷ್ಟಾಚಾರ ಸಂಸ್ಥೆಯು ಕಂಡಿತ ಸಾಮಾಜಿಕ ನ್ಯಾಯ ವದಗಿಸಿಕೊಡುವಂತಹ ಕೆಲಸ ಮಾಡುತ್ತದೆ ಎಂದಯ ಭರವಸೆ ನೀಡಿದ ರಾಜ್ಯ ಅಧ್ಯಕ್ಷ ಎಸ್.ರಾಘವೇಂದ್ರ ಹೇಳಿದರು.
ಯಾವುದೇ ಕುಂದುಕೊರತೆ ಇದ್ದಲ್ಲಿ ಆಹೋರಾತ್ರಿಯಲ್ಲಾದರು ಸಾಮಾಜಿಕ ನ್ಯಾಯಕ್ಕಾಗಿ ಸ್ಪಂದಿಸುತ್ತೇನೆ ಎಂದು ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಡಿ.ಆರ್.ಮಾರುತಿ ಹೇಳಿದರು.
ಈ ವೇಳೆ ರಾಜ್ಯ ಗೌರವ ಅಧ್ಯಕ್ಷರಾದ ಹನುಮಂತರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಸರ್ವೇಶ್ ಕುಮಾರ್, ಆರ್ ಟಿ ಐ ವಿಭಾಗದ ಮುಖ್ಯ ಸಲಹೆಗಾರ ರಾಮಲಿಂಗೇಗೌಡ, ಆರ್ ಟಿ ಐ ವಿಭಾಗದ ರಾಜ್ಯ ಸಹ ಸಂಚಾಲಕರು ಅಪ್ಪಾಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…