ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು- ನೂತನ ಅಧ್ಯಕ್ಷ ರಾಜು ಬೆಳವಂಗಲ

ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆರ್ ಟಿ‌ ಐ ಕುರಿತು ತರಬೇತಿ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಹೆಜ್ಜಾಜಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ತಾಲೂಕು ಘಟಕವನ್ನ ಸಹ ಉದ್ಘಾಟನೆ ಮಾಡಿ, ರಾಜು ಬೆಳವಂಗಲ ಅವರನ್ನ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು. ಪ್ರಶ್ನೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಹೋಗಿ ತಮ್ಮ ಹಕ್ಕುಗಳನ್ನ ಕೇಳಿ ಪಡೆಯಂತಹ ಧೈರ್ಯ ನಮ್ಮಲ್ಲಿರಬೇಕು ಎಂದು ತಾಲೂಕು ಘಟಕದ ನೂತನ ಅಧ್ಯಕ್ಷ ರಾಜು ಬೆಳವಂಗಲ ಅವರು ಹೇಳಿದರು.

ಯಾವುದೇ ಸಂದರ್ಭದಲ್ಲಿ ಮಾನವನ ಹಕ್ಕುಗಳು ಉಲಂಘನೆ ಆದರೆ ಮಾನವನ ಹಕ್ಕುಗಳು ಹಾಗೂ ಭ್ರಷ್ಟಾಚಾರ ಸಂಸ್ಥೆಯು ಕಂಡಿತ ಸಾಮಾಜಿಕ ನ್ಯಾಯ ವದಗಿಸಿಕೊಡುವಂತಹ ಕೆಲಸ ಮಾಡುತ್ತದೆ ಎಂದಯ ಭರವಸೆ ನೀಡಿದ ರಾಜ್ಯ ಅಧ್ಯಕ್ಷ ಎಸ್.ರಾಘವೇಂದ್ರ ಹೇಳಿದರು.

ಯಾವುದೇ ಕುಂದುಕೊರತೆ ಇದ್ದಲ್ಲಿ ಆಹೋರಾತ್ರಿಯಲ್ಲಾದರು ಸಾಮಾಜಿಕ ನ್ಯಾಯಕ್ಕಾಗಿ ಸ್ಪಂದಿಸುತ್ತೇನೆ ಎಂದು ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಡಿ.ಆರ್.ಮಾರುತಿ ಹೇಳಿದರು.

ಈ ವೇಳೆ ರಾಜ್ಯ ಗೌರವ ಅಧ್ಯಕ್ಷರಾದ ಹನುಮಂತರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಸರ್ವೇಶ್ ಕುಮಾರ್, ಆರ್ ಟಿ ಐ ವಿಭಾಗದ ಮುಖ್ಯ ಸಲಹೆಗಾರ ರಾಮಲಿಂಗೇಗೌಡ, ಆರ್ ಟಿ ಐ ವಿಭಾಗದ ರಾಜ್ಯ ಸಹ ಸಂಚಾಲಕರು ಅಪ್ಪಾಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago