ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು- ನೂತನ ಅಧ್ಯಕ್ಷ ರಾಜು ಬೆಳವಂಗಲ

ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆರ್ ಟಿ‌ ಐ ಕುರಿತು ತರಬೇತಿ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಹೆಜ್ಜಾಜಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ತಾಲೂಕು ಘಟಕವನ್ನ ಸಹ ಉದ್ಘಾಟನೆ ಮಾಡಿ, ರಾಜು ಬೆಳವಂಗಲ ಅವರನ್ನ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು. ಪ್ರಶ್ನೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಹೋಗಿ ತಮ್ಮ ಹಕ್ಕುಗಳನ್ನ ಕೇಳಿ ಪಡೆಯಂತಹ ಧೈರ್ಯ ನಮ್ಮಲ್ಲಿರಬೇಕು ಎಂದು ತಾಲೂಕು ಘಟಕದ ನೂತನ ಅಧ್ಯಕ್ಷ ರಾಜು ಬೆಳವಂಗಲ ಅವರು ಹೇಳಿದರು.

ಯಾವುದೇ ಸಂದರ್ಭದಲ್ಲಿ ಮಾನವನ ಹಕ್ಕುಗಳು ಉಲಂಘನೆ ಆದರೆ ಮಾನವನ ಹಕ್ಕುಗಳು ಹಾಗೂ ಭ್ರಷ್ಟಾಚಾರ ಸಂಸ್ಥೆಯು ಕಂಡಿತ ಸಾಮಾಜಿಕ ನ್ಯಾಯ ವದಗಿಸಿಕೊಡುವಂತಹ ಕೆಲಸ ಮಾಡುತ್ತದೆ ಎಂದಯ ಭರವಸೆ ನೀಡಿದ ರಾಜ್ಯ ಅಧ್ಯಕ್ಷ ಎಸ್.ರಾಘವೇಂದ್ರ ಹೇಳಿದರು.

ಯಾವುದೇ ಕುಂದುಕೊರತೆ ಇದ್ದಲ್ಲಿ ಆಹೋರಾತ್ರಿಯಲ್ಲಾದರು ಸಾಮಾಜಿಕ ನ್ಯಾಯಕ್ಕಾಗಿ ಸ್ಪಂದಿಸುತ್ತೇನೆ ಎಂದು ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಡಿ.ಆರ್.ಮಾರುತಿ ಹೇಳಿದರು.

ಈ ವೇಳೆ ರಾಜ್ಯ ಗೌರವ ಅಧ್ಯಕ್ಷರಾದ ಹನುಮಂತರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಸರ್ವೇಶ್ ಕುಮಾರ್, ಆರ್ ಟಿ ಐ ವಿಭಾಗದ ಮುಖ್ಯ ಸಲಹೆಗಾರ ರಾಮಲಿಂಗೇಗೌಡ, ಆರ್ ಟಿ ಐ ವಿಭಾಗದ ರಾಜ್ಯ ಸಹ ಸಂಚಾಲಕರು ಅಪ್ಪಾಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

12 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

14 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

14 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

15 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

19 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

20 hours ago