ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು- ನೂತನ ಅಧ್ಯಕ್ಷ ರಾಜು ಬೆಳವಂಗಲ

ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆರ್ ಟಿ‌ ಐ ಕುರಿತು ತರಬೇತಿ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಹೆಜ್ಜಾಜಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ತಾಲೂಕು ಘಟಕವನ್ನ ಸಹ ಉದ್ಘಾಟನೆ ಮಾಡಿ, ರಾಜು ಬೆಳವಂಗಲ ಅವರನ್ನ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ಜವಾಬ್ಧಾರಿ ಕಡ್ಡಾಯವಾಗಿ ಇರಲೇಬೇಕು. ಪ್ರಶ್ನೆ ಮಾಡುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಹೋಗಿ ತಮ್ಮ ಹಕ್ಕುಗಳನ್ನ ಕೇಳಿ ಪಡೆಯಂತಹ ಧೈರ್ಯ ನಮ್ಮಲ್ಲಿರಬೇಕು ಎಂದು ತಾಲೂಕು ಘಟಕದ ನೂತನ ಅಧ್ಯಕ್ಷ ರಾಜು ಬೆಳವಂಗಲ ಅವರು ಹೇಳಿದರು.

ಯಾವುದೇ ಸಂದರ್ಭದಲ್ಲಿ ಮಾನವನ ಹಕ್ಕುಗಳು ಉಲಂಘನೆ ಆದರೆ ಮಾನವನ ಹಕ್ಕುಗಳು ಹಾಗೂ ಭ್ರಷ್ಟಾಚಾರ ಸಂಸ್ಥೆಯು ಕಂಡಿತ ಸಾಮಾಜಿಕ ನ್ಯಾಯ ವದಗಿಸಿಕೊಡುವಂತಹ ಕೆಲಸ ಮಾಡುತ್ತದೆ ಎಂದಯ ಭರವಸೆ ನೀಡಿದ ರಾಜ್ಯ ಅಧ್ಯಕ್ಷ ಎಸ್.ರಾಘವೇಂದ್ರ ಹೇಳಿದರು.

ಯಾವುದೇ ಕುಂದುಕೊರತೆ ಇದ್ದಲ್ಲಿ ಆಹೋರಾತ್ರಿಯಲ್ಲಾದರು ಸಾಮಾಜಿಕ ನ್ಯಾಯಕ್ಕಾಗಿ ಸ್ಪಂದಿಸುತ್ತೇನೆ ಎಂದು ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಡಿ.ಆರ್.ಮಾರುತಿ ಹೇಳಿದರು.

ಈ ವೇಳೆ ರಾಜ್ಯ ಗೌರವ ಅಧ್ಯಕ್ಷರಾದ ಹನುಮಂತರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಸರ್ವೇಶ್ ಕುಮಾರ್, ಆರ್ ಟಿ ಐ ವಿಭಾಗದ ಮುಖ್ಯ ಸಲಹೆಗಾರ ರಾಮಲಿಂಗೇಗೌಡ, ಆರ್ ಟಿ ಐ ವಿಭಾಗದ ರಾಜ್ಯ ಸಹ ಸಂಚಾಲಕರು ಅಪ್ಪಾಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

11 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

11 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

12 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

13 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

16 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

16 hours ago