ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು ನೀಡುತ್ತಿದೆ. ಇದನ್ನು “ತೆರಿಗೆ ಭಯೋತ್ಪಾದನೆ” ಎನ್ನಲೇ? ‘”ತೆರಿಗೆ ದರೋಡೆ’”ಎನ್ನಲೇ? ಈ ಪ್ರಶ್ನೆಗೆ ರಾಜ್ಯದ ರಾಜ್ಯ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ರೂ.4.50 ಲಕ್ಷ ಕೋಟಿಗೂ ಹೆಚ್ಚು ಸಂಪನ್ಮೂಲವನ್ನು ತೆರಿಗೆ, ಸೆಸ್, ಸರ್ ಚಾರ್ಜ್ ಮೂಲಕ ಸಂಗ್ರಹಿಸಿದೆ. ಇದಕ್ಕೆ ಪ್ರತಿಯಾಗಿ ನೀಡಿದ್ದು ರೂ.79,000 ಕೋಟಿ ಮಾತ್ರ. ಕಳೆದ ಮೂರು ವರ್ಷಗಳಲ್ಲಿ ಹಲವಾರು ಬಾರಿ ಈ’ ‘’ತೆರಿಗೆ ದರೋಡೆ’’ಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದೇವೆ. ದೆಹಲಿಗೆ ಹೋಗಿ ಸಂಸತ್ ಭವನದ ಎದುರಿಗೆ ನಿಂತು ಈ ಅನ್ಯಾಯವನ್ನು ಕೂಗಿಕೂಗಿ ಹೇಳಿದ್ದೇವೆ. ಆಗ ಬಾಯಿ ಮುಚ್ಚಿಕೊಂಡು ಏಳುಕೋಟಿ ಕನ್ನಡಿಗರಿಗೆ ದ್ರೋಹಬಗೆದಿರುವ ಈ ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಮೊದಲಾದ ಬಿಜೆಪಿ ನಾಯಕರು ಈಗ ನಮ್ಮ ವಿರುದ್ಧ ಕೂಗು ಹಾಕುತ್ತಿದ್ದಾರೆ ಎಂದರು.

ಕರ್ನಾಟಕವು ಜಿಎಸ್‌ಟಿ ಸಂಗ್ರಹದಲ್ಲಿ ಇಂದು ಗಮನಾರ್ಹ ಸಾಧನೆ ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿ ರಾಜ್ಯ ಇದೆ. ಇನ್ನು ಜಿಎಸ್‌ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿ ಕರ್ನಾಟಕವಿದೆ. ವಿಪರ್ಯಾಸವೆಂದರೆ ಈ ಪ್ರಮಾಣದಲ್ಲಿ ಜಿಎಸ್‌ಟಿ ಹಣವನ್ನು ಕೇಂದ್ರಕ್ಕೆ ಸಂಗ್ರಹಿಸಿ ನೀಡಿದರೂ ಇದರಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು ಶೇ.52 ಪಾಲು ಮಾತ್ರ. ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕವು ಸಾವಿರಾರು ಕೋಟಿ ರೂಪಾಯಿ ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

15ನೇ ಹಣಕಾಸಿನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ತೆರಿಗೆ ಪಾಲನ್ನು ನೀಡದೆ, ಕೇಂದ್ರ ಸರ್ಕಾರ ವಿಧಿಸುವ ಸೆಸ್‌ಗಳು ಮತ್ತು ಸರ್‌‌ಚಾರ್ಜ್‌ಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡದೆ, ಜಿ.ಎಸ್.ಟಿ ಜಾರಿಯಿಂದ ರಾಜ್ಯಕ್ಕೆ ಆದ ನಷ್ಟವನ್ನು ಸರಿದೂಗಿಸಲು ಪರಿಹಾರ ನೀಡದೆ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನವನ್ನು ನೀಡದೆ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರವನ್ನು ಸಾಲ ಮಾಡಲೇ ಬೇಕಾದ ಅಸಹಾಯಕ ಪರಿಸ್ಥಿತಿಗೆ ತಳ್ಳಿದೆ ಎಂದರು.

ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ನೀಡುವ ಅನುದಾನದಲ್ಲಿ ಅನ್ಯಾಯ ಮಾಡದೆ ನಮಗೆ ಸಿಗಬೇಕಾದ ನ್ಯಾಯಬದ್ಧ ಸಂಪನ್ಮೂಲದ ಪಾಲನ್ನು ನೀಡಿದರೆ ಒಂದು ಪೈಸೆ ಸಾಲವನ್ನು ಮಾಡದೆ ರಾಜ್ಯದ ಆರ್ಥಿಕತೆಯನ್ನು ನಿರ್ವಹಿಸುವೆ. ಈ ಸವಾಲನ್ನು ಸ್ವೀಕರಿಸಲು ಬಿಜೆಪಿ ನಾಯಕರು ಸಿದ್ಧರಿದ್ದಾರಾ?ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ನಂತರ ಕೇಂದ್ರ ಸರ್ಕಾರಕ್ಕೆ ಅತ್ಯಧಿಕ ಪ್ರಮಾಣದ ತೆರಿಗೆ ನೀಡುವ ರಾಜ್ಯ ನಮ್ಮದು. ದೇಶದ ಸಂಪತ್ತಿಗೆ ಕರ್ನಾಟಕವು ವರ್ಷದಿಂದ ವರ್ಷಕ್ಕೆ ಹೆಚ್ಚೆಚ್ಚು ಕೊಡುಗೆಯನ್ನು ನೀಡುತ್ತಲೇ ಬಂದರೂ ಕೇಂದ್ರದಿಂದ ಕರ್ನಾಟಕಕ್ಕೆ ದೊರೆಯಬೇಕಾದ ನ್ಯಾಯಯುತ ಪಾಲಿನಲ್ಲಿ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ ಎಂದರು.

ನಮ್ಮ ಸರ್ಕಾರ ಮಾಡಿರುವ ಸಾಲವನ್ನು ಅತಿರಂಜಿತವಾಗಿ ಬಣ್ಣಿಸುವ ಬಿಜೆಪಿ ನಾಯಕರಿಗೆ ಕೇಂದ್ರ ಸರ್ಕಾರ ಪ್ರತಿಯೊಬ್ಬ ಭಾರತೀಯನ ತಲೆ ಮೇಲೆಹೊರಿಸಿರುವ ಸಾಲದ ಹೊರೆ ಕಾಣಿಸುವುದೇ ಇಲ್ಲ. ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿ ಪಟ್ಟಕ್ಕೇರಿದಾಗ ಇದ್ದ ದೇಶದ ಸಾಲದ ಮೊತ್ತ ರೂ.51.06 ಲಕ್ಷ ಕೋಟಿ, 2026-27ನೇ ಸಾಲಿನ ಬಜೆಟ್ ನಲ್ಲಿ ಇದು ರೂ.214 ಲಕ್ಷ ಕೋಟಿಗೆ ಏರಿದೆ. ಈ ಲೆಕ್ಕದ ಪ್ರಕಾರ ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ. ಮೋದಿಯವರ ಸಾಲದ ಹೊರೆ ರಾಜ್ಯದ ಏಳು ಕೋಟಿ ಕನ್ನಡಿಗರ ತಲೆ ಮೇಲೆಯೂ ಇದೆ ಎನ್ನುವುದನ್ನು ಬೊಮ್ಮಾಯಿ ಮತ್ತು ಅಶೋಕ್ ತಿಳಿದುಕೊಂಡು ಮಾತನಾಡಲಿ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

51 minutes ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

11 hours ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

13 hours ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

13 hours ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

1 day ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

1 day ago