ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಯಾಶೀಲತೆ, ಪ್ರಶ್ನೆ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು. ಇದರ ಜೊತೆಗೆ ಆಧುನಿಕ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಅರಿವು ವೃದ್ಧಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ಕನ್ನಡ ಜಾಗೃತ ಭವನದಲ್ಲಿ ಗುರುವಾರ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ನಗರದ ನೆಲದಾಂಜನೇಯಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘ ಹಾಗೂ ಬೆಂಗಳೂರಿನ ಬ್ಲಾಸಮ್ ಆಸ್ಪತ್ರೆ ವತಿಯಿಂದ ನಡೆದ ಕಾರ್ಮಿಕರ ಉಚಿತ ಆರೋಗ್ಯ ತಪಾಸಣ ಶಿಬಿರ, ಲ್ಯಾಪ್ ಟಾಪ್ ವಿತರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶವನ್ನು ಕಟ್ಟುವ ಕೆಲಸದಲ್ಲಿ ಕಟ್ಟಡ ಕಾರ್ಮಿಕರ ಕೊಡುಗೆಯು ಮಹತ್ವದ್ದಾಗಿದೆ. ಕಟ್ಟಡ ನಿರ್ಮಾಣ ಕೆಲಸದಲ್ಲಿ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವ ಕುರಿತು ಕಾರ್ಮಿಕರು, ಮೇಸ್ತ್ರಿಗಳಿಗೆ ತರಬೇತಿಗಳನ್ನು ನೀಡುವ ಕಡೆಗೂ ಕಾರ್ಮಿಕ ಇಲಾಖೆ ಗಮನ ನೀಡಬೇಕಿದೆ ಎಂದರು.
ಕಾರ್ಮಿಕ ಇಲಖೆಯ ಜಿಲ್ಲಾ ಮಟ್ಟದ ಅಧಿಕಾರಿ ಎಚ್.ಆರ್.ನಾಗೇಂದ್ರ ಮಾತನಾಡಿ, ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪಿಯುಸಿ ಹಂತದಲ್ಲೇ ಲ್ಯಾಪ್ ಟಾಪ್ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಪದವಿ ಹಂತದ ಶಿಕ್ಷಣದವರೆಗೂ ಲ್ಯಾಪ್ಟಾಪ್ಗಳು ಉಪಯೋಗಕ್ಕೆ ಬರಲಿವೆ. ತಾಲ್ಲೂಕಿನ 40 ಜನ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತಿದೆ ಎಂದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…