ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಯಾಶೀಲತೆ, ಪ್ರಶ್ನೆ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು. ಇದರ ಜೊತೆಗೆ ಆಧುನಿಕ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಅರಿವು ವೃದ್ಧಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ಕನ್ನಡ ಜಾಗೃತ ಭವನದಲ್ಲಿ ಗುರುವಾರ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ನಗರದ ನೆಲದಾಂಜನೇಯಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘ ಹಾಗೂ ಬೆಂಗಳೂರಿನ ಬ್ಲಾಸಮ್ ಆಸ್ಪತ್ರೆ ವತಿಯಿಂದ ನಡೆದ ಕಾರ್ಮಿಕರ ಉಚಿತ ಆರೋಗ್ಯ ತಪಾಸಣ ಶಿಬಿರ, ಲ್ಯಾಪ್ ಟಾಪ್ ವಿತರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶವನ್ನು ಕಟ್ಟುವ ಕೆಲಸದಲ್ಲಿ ಕಟ್ಟಡ ಕಾರ್ಮಿಕರ ಕೊಡುಗೆಯು ಮಹತ್ವದ್ದಾಗಿದೆ. ಕಟ್ಟಡ ನಿರ್ಮಾಣ ಕೆಲಸದಲ್ಲಿ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವ ಕುರಿತು ಕಾರ್ಮಿಕರು, ಮೇಸ್ತ್ರಿಗಳಿಗೆ ತರಬೇತಿಗಳನ್ನು ನೀಡುವ ಕಡೆಗೂ ಕಾರ್ಮಿಕ ಇಲಾಖೆ ಗಮನ ನೀಡಬೇಕಿದೆ ಎಂದರು.
ಕಾರ್ಮಿಕ ಇಲಖೆಯ ಜಿಲ್ಲಾ ಮಟ್ಟದ ಅಧಿಕಾರಿ ಎಚ್.ಆರ್.ನಾಗೇಂದ್ರ ಮಾತನಾಡಿ, ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪಿಯುಸಿ ಹಂತದಲ್ಲೇ ಲ್ಯಾಪ್ ಟಾಪ್ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಪದವಿ ಹಂತದ ಶಿಕ್ಷಣದವರೆಗೂ ಲ್ಯಾಪ್ಟಾಪ್ಗಳು ಉಪಯೋಗಕ್ಕೆ ಬರಲಿವೆ. ತಾಲ್ಲೂಕಿನ 40 ಜನ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತಿದೆ ಎಂದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…