ಪ್ರತಿಯೊಬ್ಬ ವಿದ್ಯಾರ್ಥಿ ತಂತ್ರಜ್ಞಾನದ ಅರಿವು, ಕ್ರೀಯಾಶೀಲತೆ, ಪ್ರಶ್ನೆ ಮಾಡುವ ಮನೋಭಾವ ವೃದ್ಧಿಸಿಕೊಳ್ಳಬೇಕು-ಶಾಸಕ ಧೀರಜ್ ಮುನಿರಾಜ್‌

ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಯಾಶೀಲತೆ, ಪ್ರಶ್ನೆ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು. ಇದರ ಜೊತೆಗೆ ಆಧುನಿಕ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಅರಿವು ವೃದ್ಧಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್‌ ಹೇಳಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ಗುರುವಾರ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ನಗರದ ನೆಲದಾಂಜನೇಯಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘ ಹಾಗೂ ಬೆಂಗಳೂರಿನ ಬ್ಲಾಸಮ್ ಆಸ್ಪತ್ರೆ ವತಿಯಿಂದ ನಡೆದ ಕಾರ್ಮಿಕರ ಉಚಿತ ಆರೋಗ್ಯ ತಪಾಸಣ ಶಿಬಿರ, ಲ್ಯಾಪ್ ಟಾಪ್ ವಿತರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ಶಿಕ್ಷಣ ಸಂಸ್ಥೆ, ಸರ್ಕಾರಿ ಕಚೇರಿ, ಖಾಸಗಿ ಉದ್ಯೋಗ ಸಂಸ್ಥೆಗಳು ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕಾಗದ ರಹಿತ ವ್ಯವಸ್ಥೆಯನ್ನ ಅಳವಡಿಸಿಕೊಳ್ಳಲಾಗುತ್ತಿದೆ. ಕಂಪ್ಯೂಟರ್ ಜ್ಞಾನವು ಶಿಕ್ಷಣದ ಒಂದು ಭಾಗವೇ ಆಗಿದೆ. ಕಾರ್ಮಿಕರ ಮಕ್ಕಳು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕಾರ್ಮಿಕ ಇಲಾಖೆ ನೀಡುತ್ತಿರುವ ಲ್ಯಾಪ್ ಟಾಪ್ ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ದೇಶವನ್ನು ಕಟ್ಟುವ ಕೆಲಸದಲ್ಲಿ ಕಟ್ಟಡ ಕಾರ್ಮಿಕರ ಕೊಡುಗೆಯು ಮಹತ್ವದ್ದಾಗಿದೆ. ಕಟ್ಟಡ ನಿರ್ಮಾಣ ಕೆಲಸದಲ್ಲಿ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವ ಕುರಿತು ಕಾರ್ಮಿಕರು, ಮೇಸ್ತ್ರಿಗಳಿಗೆ ತರಬೇತಿಗಳನ್ನು ನೀಡುವ ಕಡೆಗೂ ಕಾರ್ಮಿಕ ಇಲಾಖೆ ಗಮನ ನೀಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಸಂಸ್ಥಾಪಕ ಸಲಹೆಗಾರ ಪ್ರೊ.ಚಂದ್ರಪ್ಪ, ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ವತಿಯಿಂದ ಸೂಕ್ತ ರೀತಿಯಲ್ಲಿ ಕಟ್ಟಡ ಪರವಾನಗಿ ಸಮಯದಲ್ಲಿ ಸಂಗ್ರಹವಾಗುವ ಸೇಸ್ ನ್ನು ಕಾರ್ಮಿಕ ಇಲಾಖೆಗೆ ಜಮೆ ಮಾಡುತ್ತಿಲ್ಲ. ಇದರಿಂದಾಗಿ ಕಾರ್ಮಿಕ ಇಲಾಖೆಯ ನಿಧಿಗೆ ಹಣ ಸಂಗ್ರಹ ಕಡಿಮೆಯಾಗುತ್ತಿದೆ.ಇದರಿಂದ ಕಾರ್ಮಿಕ ಮಕ್ಕಳಿಗೆ ನೀಡಲಾಗಿತ್ತಿದ್ದ ವಿದ್ಯಾರ್ಥಿ ವೇತನ ಕಡಿಮೆಯಾಗಿದೆ. ಈ ಬಗ್ಗೆ ಶಾಸಕರು ಸರ್ಕಾರದ ಗಮನಕ್ಕೆ ತರುವ ಮೂಲಕ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆರ್ಥಿಕ ನೆರವು ದೊರೆಯುವಂತೆ ಮಾಡಬೇಕು ಎಂದರು.

ಕಾರ್ಮಿಕ ಇಲಖೆಯ ಜಿಲ್ಲಾ ಮಟ್ಟದ ಅಧಿಕಾರಿ ಎಚ್.ಆರ್.ನಾಗೇಂದ್ರ ಮಾತನಾಡಿ, ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪಿಯುಸಿ ಹಂತದಲ್ಲೇ ಲ್ಯಾಪ್ ಟಾಪ್ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಪದವಿ ಹಂತದ ಶಿಕ್ಷಣದವರೆಗೂ ಲ್ಯಾಪ್ಟಾಪ್ಗಳು ಉಪಯೋಗಕ್ಕೆ ಬರಲಿವೆ. ತಾಲ್ಲೂಕಿನ 40 ಜನ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಅರವಿಂದ ಶಂಕರಗೌಡ ವಹಿಸಿದ್ದರು. ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎಸ್.ಸುಬ್ಬರಾವ್, ಕಾರ್ಮಿಕ ಇಲಾಖೆ ನಿರೀಕ್ಷಕ ದಯಾನಂದಸಾಗರ್, ಸಂಘದ ಕಾರ್ಯದರ್ಶಿ ಜಗದೀಶ್, ಸಂಘಟನ ಕಾರ್ಯದರ್ಶಿ ರುದ್ರಮೂರ್ತಿ, ಖಜಾಂಚಿ ಸಿ.ಸತೀಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ನಗರಸಭೆ ಸದಸ್ಯರಾದ ಭಾಸ್ಕರ್, ಬಂತಿವೆಂಕಟೇಶ್ ವತ್ಸಲಾ, ಹಂಸಪ್ರಿಯಾ, ಪದ್ಮನಾಭ್, ಲಕ್ಷ್ಮೀಪತಿ, ನಾಗರತ್ನ, ರಾಜಣ್ಣ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

4 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

7 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

20 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

24 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago