ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಯಾಶೀಲತೆ, ಪ್ರಶ್ನೆ ಮಾಡುವ ಮನೋಭಾವ ಬೆಳಸಿಕೊಳ್ಳಬೇಕು. ಇದರ ಜೊತೆಗೆ ಆಧುನಿಕ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಅರಿವು ವೃದ್ಧಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ಕನ್ನಡ ಜಾಗೃತ ಭವನದಲ್ಲಿ ಗುರುವಾರ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ನಗರದ ನೆಲದಾಂಜನೇಯಸ್ವಾಮಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘ ಹಾಗೂ ಬೆಂಗಳೂರಿನ ಬ್ಲಾಸಮ್ ಆಸ್ಪತ್ರೆ ವತಿಯಿಂದ ನಡೆದ ಕಾರ್ಮಿಕರ ಉಚಿತ ಆರೋಗ್ಯ ತಪಾಸಣ ಶಿಬಿರ, ಲ್ಯಾಪ್ ಟಾಪ್ ವಿತರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶವನ್ನು ಕಟ್ಟುವ ಕೆಲಸದಲ್ಲಿ ಕಟ್ಟಡ ಕಾರ್ಮಿಕರ ಕೊಡುಗೆಯು ಮಹತ್ವದ್ದಾಗಿದೆ. ಕಟ್ಟಡ ನಿರ್ಮಾಣ ಕೆಲಸದಲ್ಲಿ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವ ಕುರಿತು ಕಾರ್ಮಿಕರು, ಮೇಸ್ತ್ರಿಗಳಿಗೆ ತರಬೇತಿಗಳನ್ನು ನೀಡುವ ಕಡೆಗೂ ಕಾರ್ಮಿಕ ಇಲಾಖೆ ಗಮನ ನೀಡಬೇಕಿದೆ ಎಂದರು.
ಕಾರ್ಮಿಕ ಇಲಖೆಯ ಜಿಲ್ಲಾ ಮಟ್ಟದ ಅಧಿಕಾರಿ ಎಚ್.ಆರ್.ನಾಗೇಂದ್ರ ಮಾತನಾಡಿ, ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪಿಯುಸಿ ಹಂತದಲ್ಲೇ ಲ್ಯಾಪ್ ಟಾಪ್ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಪದವಿ ಹಂತದ ಶಿಕ್ಷಣದವರೆಗೂ ಲ್ಯಾಪ್ಟಾಪ್ಗಳು ಉಪಯೋಗಕ್ಕೆ ಬರಲಿವೆ. ತಾಲ್ಲೂಕಿನ 40 ಜನ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತಿದೆ ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…