ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ- ವೈದ್ಯೆ ಡಾ.ಕೆ.ಎಂ.ವೇದಾಮಣಿ

ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವೈದ್ಯೆ ಡಾ. ಕೆ.ಎಂ.ವೇದಾಮಣಿ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಸಹ್ಯಾದ್ರಿ ಮತ್ತು ಜ್ಞಾನಗಂಗಾ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣದ ಮಹತ್ವವನ್ನು ಅರಿತವರು ವಿದ್ಯಾರ್ಥಿಗಳಿಗೆ ಶಿಸ್ತು ಸಕಾರಾತ್ಮಕ ಬೆಳವಣಿಗೆ ಸಹಕಾರಿ ಆಗುತ್ತದೆ. ಮಕ್ಕಳನ್ನು  ಸುಶಿಕ್ಷಿತಗೊಳಿಸುವಲ್ಲಿ ಪೋಷಕರ ಪಾತ್ರ ಮಹತ್ವದಾಗಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ವಿನಯವು ಬಹುಮುಖ್ಯವಾಗಿರುತ್ತದೆ. ಮಾನವೀಯ ಮೌಲ್ಯಗಳೊಂದಿಗೆ ಆರೋಗ್ಯಕರ ಜೀವನ ಶೈಲಿಯಿಂದ  ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಕನ್ನಡ ಭಾಷಾ ವಿಷಯ ಪರೀಕ್ಷಕರಾದ ಪದ್ಮಾವತಿ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮಗೊಳಿಸಲು 20 ಅಂಶಗಳ ಕಾರ್ಯಕ್ರಮವನ್ನು ರೂಪಿಸಿದೆ. ಉತ್ತಮ ಫಲಿತಾಂಶ ಮತ್ತು ಗುಣಮಟ್ಟದ ಶಿಕ್ಷಣ ಶಿಕ್ಷಕರ ಗುರಿಯಾಗಿದೆ.‌ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯ ಭಾಗವಹಿಸಬೇಕು. ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಪ್ರತಿಭೆಯು  ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪತ್ರಕರ್ತ ಡಿ.ಶ್ರೀಕಾಂತ್, ನಿವೃತ್ತ ಮುಖ್ಯಶಿಕ್ಷಕ ಹನುಮೇಗೌಡ, ಜ್ಞಾನಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆರ್.ವಿಜಯಕುಮಾರ್ ಮತ್ತು ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಮುಖ್ಯಶಿಕ್ಷಕರುಗಳಾದ ರವಿಕುಮಾರ್, ಜಗದೀಶ್ ಮತ್ತು ಶಿಕ್ಷಕರು, ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳಾದ ಎನ್.ಅಭಿಷೇಕ್, ಎಚ್.ಎಸ್.ಅಮೂಲ್ಯ, ಟಿ.ಎಚ್.ಸೃಜನ್ ಮುಂತಾದವರು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

5 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

6 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

9 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

18 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago