ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವೈದ್ಯೆ ಡಾ. ಕೆ.ಎಂ.ವೇದಾಮಣಿ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಸಹ್ಯಾದ್ರಿ ಮತ್ತು ಜ್ಞಾನಗಂಗಾ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಣದ ಮಹತ್ವವನ್ನು ಅರಿತವರು ವಿದ್ಯಾರ್ಥಿಗಳಿಗೆ ಶಿಸ್ತು ಸಕಾರಾತ್ಮಕ ಬೆಳವಣಿಗೆ ಸಹಕಾರಿ ಆಗುತ್ತದೆ. ಮಕ್ಕಳನ್ನು ಸುಶಿಕ್ಷಿತಗೊಳಿಸುವಲ್ಲಿ ಪೋಷಕರ ಪಾತ್ರ ಮಹತ್ವದಾಗಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ವಿನಯವು ಬಹುಮುಖ್ಯವಾಗಿರುತ್ತದೆ. ಮಾನವೀಯ ಮೌಲ್ಯಗಳೊಂದಿಗೆ ಆರೋಗ್ಯಕರ ಜೀವನ ಶೈಲಿಯಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಕನ್ನಡ ಭಾಷಾ ವಿಷಯ ಪರೀಕ್ಷಕರಾದ ಪದ್ಮಾವತಿ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮಗೊಳಿಸಲು 20 ಅಂಶಗಳ ಕಾರ್ಯಕ್ರಮವನ್ನು ರೂಪಿಸಿದೆ. ಉತ್ತಮ ಫಲಿತಾಂಶ ಮತ್ತು ಗುಣಮಟ್ಟದ ಶಿಕ್ಷಣ ಶಿಕ್ಷಕರ ಗುರಿಯಾಗಿದೆ. ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯ ಭಾಗವಹಿಸಬೇಕು. ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಪ್ರತಿಭೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪತ್ರಕರ್ತ ಡಿ.ಶ್ರೀಕಾಂತ್, ನಿವೃತ್ತ ಮುಖ್ಯಶಿಕ್ಷಕ ಹನುಮೇಗೌಡ, ಜ್ಞಾನಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆರ್.ವಿಜಯಕುಮಾರ್ ಮತ್ತು ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಮುಖ್ಯಶಿಕ್ಷಕರುಗಳಾದ ರವಿಕುಮಾರ್, ಜಗದೀಶ್ ಮತ್ತು ಶಿಕ್ಷಕರು, ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳಾದ ಎನ್.ಅಭಿಷೇಕ್, ಎಚ್.ಎಸ್.ಅಮೂಲ್ಯ, ಟಿ.ಎಚ್.ಸೃಜನ್ ಮುಂತಾದವರು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…