ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ- ವೈದ್ಯೆ ಡಾ.ಕೆ.ಎಂ.ವೇದಾಮಣಿ

ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವೈದ್ಯೆ ಡಾ. ಕೆ.ಎಂ.ವೇದಾಮಣಿ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಸಹ್ಯಾದ್ರಿ ಮತ್ತು ಜ್ಞಾನಗಂಗಾ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣದ ಮಹತ್ವವನ್ನು ಅರಿತವರು ವಿದ್ಯಾರ್ಥಿಗಳಿಗೆ ಶಿಸ್ತು ಸಕಾರಾತ್ಮಕ ಬೆಳವಣಿಗೆ ಸಹಕಾರಿ ಆಗುತ್ತದೆ. ಮಕ್ಕಳನ್ನು  ಸುಶಿಕ್ಷಿತಗೊಳಿಸುವಲ್ಲಿ ಪೋಷಕರ ಪಾತ್ರ ಮಹತ್ವದಾಗಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ವಿನಯವು ಬಹುಮುಖ್ಯವಾಗಿರುತ್ತದೆ. ಮಾನವೀಯ ಮೌಲ್ಯಗಳೊಂದಿಗೆ ಆರೋಗ್ಯಕರ ಜೀವನ ಶೈಲಿಯಿಂದ  ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಕನ್ನಡ ಭಾಷಾ ವಿಷಯ ಪರೀಕ್ಷಕರಾದ ಪದ್ಮಾವತಿ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮಗೊಳಿಸಲು 20 ಅಂಶಗಳ ಕಾರ್ಯಕ್ರಮವನ್ನು ರೂಪಿಸಿದೆ. ಉತ್ತಮ ಫಲಿತಾಂಶ ಮತ್ತು ಗುಣಮಟ್ಟದ ಶಿಕ್ಷಣ ಶಿಕ್ಷಕರ ಗುರಿಯಾಗಿದೆ.‌ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯ ಭಾಗವಹಿಸಬೇಕು. ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಪ್ರತಿಭೆಯು  ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪತ್ರಕರ್ತ ಡಿ.ಶ್ರೀಕಾಂತ್, ನಿವೃತ್ತ ಮುಖ್ಯಶಿಕ್ಷಕ ಹನುಮೇಗೌಡ, ಜ್ಞಾನಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆರ್.ವಿಜಯಕುಮಾರ್ ಮತ್ತು ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಮುಖ್ಯಶಿಕ್ಷಕರುಗಳಾದ ರವಿಕುಮಾರ್, ಜಗದೀಶ್ ಮತ್ತು ಶಿಕ್ಷಕರು, ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳಾದ ಎನ್.ಅಭಿಷೇಕ್, ಎಚ್.ಎಸ್.ಅಮೂಲ್ಯ, ಟಿ.ಎಚ್.ಸೃಜನ್ ಮುಂತಾದವರು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

4 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

10 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

20 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

23 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

1 day ago