ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ- ವೈದ್ಯೆ ಡಾ.ಕೆ.ಎಂ.ವೇದಾಮಣಿ

ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವೈದ್ಯೆ ಡಾ. ಕೆ.ಎಂ.ವೇದಾಮಣಿ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಸಹ್ಯಾದ್ರಿ ಮತ್ತು ಜ್ಞಾನಗಂಗಾ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣದ ಮಹತ್ವವನ್ನು ಅರಿತವರು ವಿದ್ಯಾರ್ಥಿಗಳಿಗೆ ಶಿಸ್ತು ಸಕಾರಾತ್ಮಕ ಬೆಳವಣಿಗೆ ಸಹಕಾರಿ ಆಗುತ್ತದೆ. ಮಕ್ಕಳನ್ನು  ಸುಶಿಕ್ಷಿತಗೊಳಿಸುವಲ್ಲಿ ಪೋಷಕರ ಪಾತ್ರ ಮಹತ್ವದಾಗಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ವಿನಯವು ಬಹುಮುಖ್ಯವಾಗಿರುತ್ತದೆ. ಮಾನವೀಯ ಮೌಲ್ಯಗಳೊಂದಿಗೆ ಆರೋಗ್ಯಕರ ಜೀವನ ಶೈಲಿಯಿಂದ  ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಕನ್ನಡ ಭಾಷಾ ವಿಷಯ ಪರೀಕ್ಷಕರಾದ ಪದ್ಮಾವತಿ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮಗೊಳಿಸಲು 20 ಅಂಶಗಳ ಕಾರ್ಯಕ್ರಮವನ್ನು ರೂಪಿಸಿದೆ. ಉತ್ತಮ ಫಲಿತಾಂಶ ಮತ್ತು ಗುಣಮಟ್ಟದ ಶಿಕ್ಷಣ ಶಿಕ್ಷಕರ ಗುರಿಯಾಗಿದೆ.‌ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯ ಭಾಗವಹಿಸಬೇಕು. ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಪ್ರತಿಭೆಯು  ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪತ್ರಕರ್ತ ಡಿ.ಶ್ರೀಕಾಂತ್, ನಿವೃತ್ತ ಮುಖ್ಯಶಿಕ್ಷಕ ಹನುಮೇಗೌಡ, ಜ್ಞಾನಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆರ್.ವಿಜಯಕುಮಾರ್ ಮತ್ತು ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಮುಖ್ಯಶಿಕ್ಷಕರುಗಳಾದ ರವಿಕುಮಾರ್, ಜಗದೀಶ್ ಮತ್ತು ಶಿಕ್ಷಕರು, ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳಾದ ಎನ್.ಅಭಿಷೇಕ್, ಎಚ್.ಎಸ್.ಅಮೂಲ್ಯ, ಟಿ.ಎಚ್.ಸೃಜನ್ ಮುಂತಾದವರು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

7 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

7 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

7 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

8 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

9 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

13 hours ago