ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ- ಉಪನ್ಯಾಸಕ ಸುಧಾಕರ್

ಎಲ್ಲಾ ವೃತ್ತಿಗಳಲ್ಲಿ ನಿವೃತ್ತಿ ಹೊಂದಿದ ಮೇಲೆ ಮಾಜಿ ಅನ್ನೋ ಪದ ಇರುತ್ತದೆ‌. ಆದರೆ ಶಿಕ್ಷಕ ವೃತ್ತಿಯಲ್ಲಿ ಮಾಜಿ ಅನ್ನೋ ಪದ ಇರೋದಿಲ್ಲ. ಶಿಕ್ಷಕರು ಸದಾ ಕಲಿಯುತ್ತಿರುತ್ತಾರೆ ಕಲಿತ್ತದ್ದನ್ನ ಇನ್ನೊಬ್ಬರಿಗೆ ಕಲಿಸುವ ಹಂಬಲ ಶಿಕ್ಷಕರಿಗೆ ಮಾತ್ರ ಇರುತ್ತದೆ ಎಂದು ಉಪನ್ಯಾಸ ಸುಧಾಕರ್ ಹೇಳಿದರು.

ತಾಲೂಕಿನ ಗುಂಜೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ. ಪ್ರಾಥಮಿಕ ಶಿಕ್ಷಣವು ಎಲ್ಲರಿಗೂ ತಳಹದಿ. ವಿದ್ಯಾದಾನ ಮಾಡುವವರನ್ನ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.

ನಂತರ ಹಳೇ ವಿದ್ಯಾರ್ಥಿ ಹರೀಶ್ ಮಾತನಾಡಿ, ನಮ್ಮೂರಿನ ಶಾಲೆಗೆ ನೂರು ವರ್ಷಗಳ ಇತಿಹಾಸ ಇದೆ. 1975-2023ರ ಬ್ಯಾಚ್ ನ ಎಲ್ಲಾ ಹಳೇ ವಿದ್ಯಾರ್ಥಿಗಳು ಸೇರಿ ನಮಗೆ ಪಾಠ ಹೇಳಿಕೊಟ್ಟ ಶಿಕ್ಷಕರಿಗೆ ಗುರುವಂದನೆ ಮಾಡಿರುವುದು ಸಂತೋಷವಾಗಿದೆ. ಶಿಕ್ಷಕರು ಹಾಕಿ‌ಕೊಟ್ಟ ಒಳ್ಳೆ ಮಾರ್ಗದಲ್ಲಿ ನಡೆದಿರುವುದರಿಂದ ನಾವು ಈಗ ಉತ್ತಮ ಪ್ರಜೆಗಳಾಗಿ ಜೀವನ ರೂಪಿಸಿಕೊಂಡಿದ್ದೇವೆ. ಅವರಿಲ್ಲದೇ ನಾವಿಲ್ಲ. ನಾವು ಶಿಕ್ಷಕರಿಗೆ ಸದಾ ಕಾಲ ಚಿರ ಋಣಿಯಾಗಿರುತ್ತೇವೆ ಎಂದರು.

ನಂತರ ಶಿಕ್ಷಕ ಚಂದ್ರಶೇಖರಯ್ಯ ಮಾತನಾಡಿ, ಪಾಠ ಹೇಳಿಕೊಟ್ಟ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಗೌರವ ನೀಡುತ್ತಿರುವುದು ಬಹಳ ಸಂತೋಷದ ಸಂಗತಿ. ಒಬ್ಬ ಶಿಕ್ಷಕನಿಗೆ ಯಾವಾಗ ಸಂತೋಷ ಆಗುತ್ತೆಂದರೆ ತನ್ನ ವಿದ್ಯಾರ್ಥಿ ದೇಶದ ಉತ್ತಮ ಪ್ರಜೆಯಾದಾಗ, ಅಸಹಾಯಕರಿಗೆ ಸಹಾಯ ಮಾಡಿದಾಗ ಎಂದರು.

ಈ ಹಿಂದೆ ಖಾಸಗಿ ಶಾಲೆಗಳ ಹಾವಳಿ ಕಡಿಮೆ ಇತ್ತು. ಈಗ ಖಾಸಗಿ ಶಾಲೆಗಳು ಹೆಚ್ಚಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಶೂ, ಪಠ್ಯಪುಸ್ತಕ, ಬ್ಯಾಗ್, ಸಮವಸ್ತ್ರ, ಬಿಸಿ ಊಟ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲವೂ ಉಚಿತವಾಗಿ ನೀಡುತ್ತಿದೆ. ನುರಿತ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಲಾಗಿದೆ. ಆದರೆ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿಲ್ಲ ಎಂದರು.

ಈ ವೇಳೆ ಶಾಲೆಯ ಹಳೇ ವಿದ್ಯಾರ್ಥಿಗಳಾದ  ಮಂಜುನಾಥ್, ಅಪೂರ್ವ, ಪುಷ್ಪ, ಮುನಿರಾಜ, ರಾಮಲಕ್ಷಮ್ಮ, ಚಂದ್ರಪ್ಪ, ನರಸಿಂಹಮೂರ್ತಿ, ರಾಮಮೂರ್ತಿ, ಶ್ರೀನಿವಾಸ್, ಒಬಳಪ್ಪ, ಗೋವಿಂದರಾಜು, ಮಧುಸೂಧನ್, ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago