ಎಲ್ಲಾ ವೃತ್ತಿಗಳಲ್ಲಿ ನಿವೃತ್ತಿ ಹೊಂದಿದ ಮೇಲೆ ಮಾಜಿ ಅನ್ನೋ ಪದ ಇರುತ್ತದೆ. ಆದರೆ ಶಿಕ್ಷಕ ವೃತ್ತಿಯಲ್ಲಿ ಮಾಜಿ ಅನ್ನೋ ಪದ ಇರೋದಿಲ್ಲ. ಶಿಕ್ಷಕರು ಸದಾ ಕಲಿಯುತ್ತಿರುತ್ತಾರೆ ಕಲಿತ್ತದ್ದನ್ನ ಇನ್ನೊಬ್ಬರಿಗೆ ಕಲಿಸುವ ಹಂಬಲ ಶಿಕ್ಷಕರಿಗೆ ಮಾತ್ರ ಇರುತ್ತದೆ ಎಂದು ಉಪನ್ಯಾಸ ಸುಧಾಕರ್ ಹೇಳಿದರು.
ತಾಲೂಕಿನ ಗುಂಜೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ. ಪ್ರಾಥಮಿಕ ಶಿಕ್ಷಣವು ಎಲ್ಲರಿಗೂ ತಳಹದಿ. ವಿದ್ಯಾದಾನ ಮಾಡುವವರನ್ನ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.
ನಂತರ ಶಿಕ್ಷಕ ಚಂದ್ರಶೇಖರಯ್ಯ ಮಾತನಾಡಿ, ಪಾಠ ಹೇಳಿಕೊಟ್ಟ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಗೌರವ ನೀಡುತ್ತಿರುವುದು ಬಹಳ ಸಂತೋಷದ ಸಂಗತಿ. ಒಬ್ಬ ಶಿಕ್ಷಕನಿಗೆ ಯಾವಾಗ ಸಂತೋಷ ಆಗುತ್ತೆಂದರೆ ತನ್ನ ವಿದ್ಯಾರ್ಥಿ ದೇಶದ ಉತ್ತಮ ಪ್ರಜೆಯಾದಾಗ, ಅಸಹಾಯಕರಿಗೆ ಸಹಾಯ ಮಾಡಿದಾಗ ಎಂದರು.
ಈ ಹಿಂದೆ ಖಾಸಗಿ ಶಾಲೆಗಳ ಹಾವಳಿ ಕಡಿಮೆ ಇತ್ತು. ಈಗ ಖಾಸಗಿ ಶಾಲೆಗಳು ಹೆಚ್ಚಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಶೂ, ಪಠ್ಯಪುಸ್ತಕ, ಬ್ಯಾಗ್, ಸಮವಸ್ತ್ರ, ಬಿಸಿ ಊಟ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲವೂ ಉಚಿತವಾಗಿ ನೀಡುತ್ತಿದೆ. ನುರಿತ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಲಾಗಿದೆ. ಆದರೆ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿಲ್ಲ ಎಂದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…