ಎಲ್ಲಾ ವೃತ್ತಿಗಳಲ್ಲಿ ನಿವೃತ್ತಿ ಹೊಂದಿದ ಮೇಲೆ ಮಾಜಿ ಅನ್ನೋ ಪದ ಇರುತ್ತದೆ. ಆದರೆ ಶಿಕ್ಷಕ ವೃತ್ತಿಯಲ್ಲಿ ಮಾಜಿ ಅನ್ನೋ ಪದ ಇರೋದಿಲ್ಲ. ಶಿಕ್ಷಕರು ಸದಾ ಕಲಿಯುತ್ತಿರುತ್ತಾರೆ ಕಲಿತ್ತದ್ದನ್ನ ಇನ್ನೊಬ್ಬರಿಗೆ ಕಲಿಸುವ ಹಂಬಲ ಶಿಕ್ಷಕರಿಗೆ ಮಾತ್ರ ಇರುತ್ತದೆ ಎಂದು ಉಪನ್ಯಾಸ ಸುಧಾಕರ್ ಹೇಳಿದರು.
ತಾಲೂಕಿನ ಗುಂಜೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ. ಪ್ರಾಥಮಿಕ ಶಿಕ್ಷಣವು ಎಲ್ಲರಿಗೂ ತಳಹದಿ. ವಿದ್ಯಾದಾನ ಮಾಡುವವರನ್ನ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.
ನಂತರ ಶಿಕ್ಷಕ ಚಂದ್ರಶೇಖರಯ್ಯ ಮಾತನಾಡಿ, ಪಾಠ ಹೇಳಿಕೊಟ್ಟ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಗೌರವ ನೀಡುತ್ತಿರುವುದು ಬಹಳ ಸಂತೋಷದ ಸಂಗತಿ. ಒಬ್ಬ ಶಿಕ್ಷಕನಿಗೆ ಯಾವಾಗ ಸಂತೋಷ ಆಗುತ್ತೆಂದರೆ ತನ್ನ ವಿದ್ಯಾರ್ಥಿ ದೇಶದ ಉತ್ತಮ ಪ್ರಜೆಯಾದಾಗ, ಅಸಹಾಯಕರಿಗೆ ಸಹಾಯ ಮಾಡಿದಾಗ ಎಂದರು.
ಈ ಹಿಂದೆ ಖಾಸಗಿ ಶಾಲೆಗಳ ಹಾವಳಿ ಕಡಿಮೆ ಇತ್ತು. ಈಗ ಖಾಸಗಿ ಶಾಲೆಗಳು ಹೆಚ್ಚಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಶೂ, ಪಠ್ಯಪುಸ್ತಕ, ಬ್ಯಾಗ್, ಸಮವಸ್ತ್ರ, ಬಿಸಿ ಊಟ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲವೂ ಉಚಿತವಾಗಿ ನೀಡುತ್ತಿದೆ. ನುರಿತ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಲಾಗಿದೆ. ಆದರೆ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿಲ್ಲ ಎಂದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…