ಎಲ್ಲಾ ವೃತ್ತಿಗಳಲ್ಲಿ ನಿವೃತ್ತಿ ಹೊಂದಿದ ಮೇಲೆ ಮಾಜಿ ಅನ್ನೋ ಪದ ಇರುತ್ತದೆ. ಆದರೆ ಶಿಕ್ಷಕ ವೃತ್ತಿಯಲ್ಲಿ ಮಾಜಿ ಅನ್ನೋ ಪದ ಇರೋದಿಲ್ಲ. ಶಿಕ್ಷಕರು ಸದಾ ಕಲಿಯುತ್ತಿರುತ್ತಾರೆ ಕಲಿತ್ತದ್ದನ್ನ ಇನ್ನೊಬ್ಬರಿಗೆ ಕಲಿಸುವ ಹಂಬಲ ಶಿಕ್ಷಕರಿಗೆ ಮಾತ್ರ ಇರುತ್ತದೆ ಎಂದು ಉಪನ್ಯಾಸ ಸುಧಾಕರ್ ಹೇಳಿದರು.
ತಾಲೂಕಿನ ಗುಂಜೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ. ಪ್ರಾಥಮಿಕ ಶಿಕ್ಷಣವು ಎಲ್ಲರಿಗೂ ತಳಹದಿ. ವಿದ್ಯಾದಾನ ಮಾಡುವವರನ್ನ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.
ನಂತರ ಶಿಕ್ಷಕ ಚಂದ್ರಶೇಖರಯ್ಯ ಮಾತನಾಡಿ, ಪಾಠ ಹೇಳಿಕೊಟ್ಟ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಗೌರವ ನೀಡುತ್ತಿರುವುದು ಬಹಳ ಸಂತೋಷದ ಸಂಗತಿ. ಒಬ್ಬ ಶಿಕ್ಷಕನಿಗೆ ಯಾವಾಗ ಸಂತೋಷ ಆಗುತ್ತೆಂದರೆ ತನ್ನ ವಿದ್ಯಾರ್ಥಿ ದೇಶದ ಉತ್ತಮ ಪ್ರಜೆಯಾದಾಗ, ಅಸಹಾಯಕರಿಗೆ ಸಹಾಯ ಮಾಡಿದಾಗ ಎಂದರು.
ಈ ಹಿಂದೆ ಖಾಸಗಿ ಶಾಲೆಗಳ ಹಾವಳಿ ಕಡಿಮೆ ಇತ್ತು. ಈಗ ಖಾಸಗಿ ಶಾಲೆಗಳು ಹೆಚ್ಚಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಶೂ, ಪಠ್ಯಪುಸ್ತಕ, ಬ್ಯಾಗ್, ಸಮವಸ್ತ್ರ, ಬಿಸಿ ಊಟ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲವೂ ಉಚಿತವಾಗಿ ನೀಡುತ್ತಿದೆ. ನುರಿತ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಲಾಗಿದೆ. ಆದರೆ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿಲ್ಲ ಎಂದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…