ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ- ಉಪನ್ಯಾಸಕ ಸುಧಾಕರ್

ಎಲ್ಲಾ ವೃತ್ತಿಗಳಲ್ಲಿ ನಿವೃತ್ತಿ ಹೊಂದಿದ ಮೇಲೆ ಮಾಜಿ ಅನ್ನೋ ಪದ ಇರುತ್ತದೆ‌. ಆದರೆ ಶಿಕ್ಷಕ ವೃತ್ತಿಯಲ್ಲಿ ಮಾಜಿ ಅನ್ನೋ ಪದ ಇರೋದಿಲ್ಲ. ಶಿಕ್ಷಕರು ಸದಾ ಕಲಿಯುತ್ತಿರುತ್ತಾರೆ ಕಲಿತ್ತದ್ದನ್ನ ಇನ್ನೊಬ್ಬರಿಗೆ ಕಲಿಸುವ ಹಂಬಲ ಶಿಕ್ಷಕರಿಗೆ ಮಾತ್ರ ಇರುತ್ತದೆ ಎಂದು ಉಪನ್ಯಾಸ ಸುಧಾಕರ್ ಹೇಳಿದರು.

ತಾಲೂಕಿನ ಗುಂಜೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ. ಪ್ರಾಥಮಿಕ ಶಿಕ್ಷಣವು ಎಲ್ಲರಿಗೂ ತಳಹದಿ. ವಿದ್ಯಾದಾನ ಮಾಡುವವರನ್ನ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.

ನಂತರ ಹಳೇ ವಿದ್ಯಾರ್ಥಿ ಹರೀಶ್ ಮಾತನಾಡಿ, ನಮ್ಮೂರಿನ ಶಾಲೆಗೆ ನೂರು ವರ್ಷಗಳ ಇತಿಹಾಸ ಇದೆ. 1975-2023ರ ಬ್ಯಾಚ್ ನ ಎಲ್ಲಾ ಹಳೇ ವಿದ್ಯಾರ್ಥಿಗಳು ಸೇರಿ ನಮಗೆ ಪಾಠ ಹೇಳಿಕೊಟ್ಟ ಶಿಕ್ಷಕರಿಗೆ ಗುರುವಂದನೆ ಮಾಡಿರುವುದು ಸಂತೋಷವಾಗಿದೆ. ಶಿಕ್ಷಕರು ಹಾಕಿ‌ಕೊಟ್ಟ ಒಳ್ಳೆ ಮಾರ್ಗದಲ್ಲಿ ನಡೆದಿರುವುದರಿಂದ ನಾವು ಈಗ ಉತ್ತಮ ಪ್ರಜೆಗಳಾಗಿ ಜೀವನ ರೂಪಿಸಿಕೊಂಡಿದ್ದೇವೆ. ಅವರಿಲ್ಲದೇ ನಾವಿಲ್ಲ. ನಾವು ಶಿಕ್ಷಕರಿಗೆ ಸದಾ ಕಾಲ ಚಿರ ಋಣಿಯಾಗಿರುತ್ತೇವೆ ಎಂದರು.

ನಂತರ ಶಿಕ್ಷಕ ಚಂದ್ರಶೇಖರಯ್ಯ ಮಾತನಾಡಿ, ಪಾಠ ಹೇಳಿಕೊಟ್ಟ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಗೌರವ ನೀಡುತ್ತಿರುವುದು ಬಹಳ ಸಂತೋಷದ ಸಂಗತಿ. ಒಬ್ಬ ಶಿಕ್ಷಕನಿಗೆ ಯಾವಾಗ ಸಂತೋಷ ಆಗುತ್ತೆಂದರೆ ತನ್ನ ವಿದ್ಯಾರ್ಥಿ ದೇಶದ ಉತ್ತಮ ಪ್ರಜೆಯಾದಾಗ, ಅಸಹಾಯಕರಿಗೆ ಸಹಾಯ ಮಾಡಿದಾಗ ಎಂದರು.

ಈ ಹಿಂದೆ ಖಾಸಗಿ ಶಾಲೆಗಳ ಹಾವಳಿ ಕಡಿಮೆ ಇತ್ತು. ಈಗ ಖಾಸಗಿ ಶಾಲೆಗಳು ಹೆಚ್ಚಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಶೂ, ಪಠ್ಯಪುಸ್ತಕ, ಬ್ಯಾಗ್, ಸಮವಸ್ತ್ರ, ಬಿಸಿ ಊಟ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲವೂ ಉಚಿತವಾಗಿ ನೀಡುತ್ತಿದೆ. ನುರಿತ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಲಾಗಿದೆ. ಆದರೆ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿಲ್ಲ ಎಂದರು.

ಈ ವೇಳೆ ಶಾಲೆಯ ಹಳೇ ವಿದ್ಯಾರ್ಥಿಗಳಾದ  ಮಂಜುನಾಥ್, ಅಪೂರ್ವ, ಪುಷ್ಪ, ಮುನಿರಾಜ, ರಾಮಲಕ್ಷಮ್ಮ, ಚಂದ್ರಪ್ಪ, ನರಸಿಂಹಮೂರ್ತಿ, ರಾಮಮೂರ್ತಿ, ಶ್ರೀನಿವಾಸ್, ಒಬಳಪ್ಪ, ಗೋವಿಂದರಾಜು, ಮಧುಸೂಧನ್, ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

15 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

27 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago