ಎಲ್ಲಾ ವೃತ್ತಿಗಳಲ್ಲಿ ನಿವೃತ್ತಿ ಹೊಂದಿದ ಮೇಲೆ ಮಾಜಿ ಅನ್ನೋ ಪದ ಇರುತ್ತದೆ. ಆದರೆ ಶಿಕ್ಷಕ ವೃತ್ತಿಯಲ್ಲಿ ಮಾಜಿ ಅನ್ನೋ ಪದ ಇರೋದಿಲ್ಲ. ಶಿಕ್ಷಕರು ಸದಾ ಕಲಿಯುತ್ತಿರುತ್ತಾರೆ ಕಲಿತ್ತದ್ದನ್ನ ಇನ್ನೊಬ್ಬರಿಗೆ ಕಲಿಸುವ ಹಂಬಲ ಶಿಕ್ಷಕರಿಗೆ ಮಾತ್ರ ಇರುತ್ತದೆ ಎಂದು ಉಪನ್ಯಾಸ ಸುಧಾಕರ್ ಹೇಳಿದರು.
ತಾಲೂಕಿನ ಗುಂಜೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ. ಪ್ರಾಥಮಿಕ ಶಿಕ್ಷಣವು ಎಲ್ಲರಿಗೂ ತಳಹದಿ. ವಿದ್ಯಾದಾನ ಮಾಡುವವರನ್ನ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.
ನಂತರ ಶಿಕ್ಷಕ ಚಂದ್ರಶೇಖರಯ್ಯ ಮಾತನಾಡಿ, ಪಾಠ ಹೇಳಿಕೊಟ್ಟ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಂಡು ಗೌರವ ನೀಡುತ್ತಿರುವುದು ಬಹಳ ಸಂತೋಷದ ಸಂಗತಿ. ಒಬ್ಬ ಶಿಕ್ಷಕನಿಗೆ ಯಾವಾಗ ಸಂತೋಷ ಆಗುತ್ತೆಂದರೆ ತನ್ನ ವಿದ್ಯಾರ್ಥಿ ದೇಶದ ಉತ್ತಮ ಪ್ರಜೆಯಾದಾಗ, ಅಸಹಾಯಕರಿಗೆ ಸಹಾಯ ಮಾಡಿದಾಗ ಎಂದರು.
ಈ ಹಿಂದೆ ಖಾಸಗಿ ಶಾಲೆಗಳ ಹಾವಳಿ ಕಡಿಮೆ ಇತ್ತು. ಈಗ ಖಾಸಗಿ ಶಾಲೆಗಳು ಹೆಚ್ಚಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಶೂ, ಪಠ್ಯಪುಸ್ತಕ, ಬ್ಯಾಗ್, ಸಮವಸ್ತ್ರ, ಬಿಸಿ ಊಟ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲವೂ ಉಚಿತವಾಗಿ ನೀಡುತ್ತಿದೆ. ನುರಿತ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಲಾಗಿದೆ. ಆದರೆ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿಲ್ಲ ಎಂದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…