ಪ್ರತಿವರ್ಷ ರೈತರಿಗಾಗಿ 20 ಕೋಟಿ ವಿನಿಯೋಗ- ಬಮೂಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಶೇ.30ರಷ್ಟು ಮೀಸಲಾತಿ ಜಾರಿ- ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್

ಹಾಲು ಉತ್ಪಾದಕ ರೈತರು ಮಕ್ಕಳ ವಿದೇಶ ವ್ಯಾಸಂಗ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ವಿದ್ಯಾರ್ಥಿಗಳಿಗೆ ಬಮುಲ್ ಟ್ರಸ್ಟ್ ನಿಂದ ಪ್ರತಿವರ್ಷ 20 ಕೋಟಿ ರೂ. ವಿನಿಯೋಗ ಮಾಡಲಾಗುತ್ತಿದೆ. ಬಮುಲ್ ಆಡಳಿತ ಮಂಡಳಿಯ ಎಲ್ಲಾ ಯೋಜನೆಗಳಿಗೆ ಒಕ್ಕೂಟದ 14 ಜನ ನಿರ್ದೇಶಕರು ಪಕ್ಷಾತೀತವಾಗಿ ಸಂಪೂರ್ಣವಾದ ಬೆಂಬಲ ನೀಡುತ್ತಿದ್ದಾರೆ. ಈ ಮೂಲಕ ರೈತರ ಅಭ್ಯುದೇಯಕ್ಕೆ ಶ್ರಮಿಸಲಾಗುತ್ತಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್ ಹೇಳಿದರು.

ನಗರದ ಒಕ್ಕಲಿಗರ ಭವನದಲ್ಲಿ ಬಮುಲ್ ವತಿಯಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಮುಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಉದ್ಯೋಗವನ್ನು ನೀಡುವ ನಿಟ್ಟಿನಲ್ಲಿ ಶೇ.30 ರಷ್ಟು ಮೀಸಲಾತಿಯನ್ನು ಜಾರಿಗೆ ಮಾಡುವ ತೀರ್ಮಾನವನ್ನು ಆಡಳಿತ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಬಿಡಿಸಿಸಿ ಬ್ಯಾಂಕ್ ನಿಂದ ಮಿನಿ ಡೇರಿಗೆ 15 ಲಕ್ಷ, ಎರಡು ಹಸುಗಳಿಗೆ 1.80 ಲಕ್ಷ ರೂ.ಗಳನ್ನು ಶೇ.3 ರಷ್ಡು ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆಯನ್ನು ಜಾರಿ ಮಾಡಲಾಗಿದೆ. ಹಸುಗಳು ಸಾವನ್ನಪ್ಪಿದ್ದಾಗ ರೈತರಿಗೆ ವಿಮೆ ಹಣ ನೀಡಲು 6 ತಿಂಗಳು ಸಮಯವಾಗುತ್ತಿತ್ತು. ಈ ಸಮಯವನ್ನ ಕಡಿಮೆ ಮಾಡಲು ಬಮುಲ್ ವತಿಯಿಂದಲೇ ವಿಮೆ ಯೋಜನೆ ಜಾರಿ ಮಾಡಿ ಕೇವಲ 15 ದಿನಗಳಲ್ಲಿ ಪರಿಹಾರ ಹಣ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

ರೈತರು ಗುಣಮಟ್ಟದ ಹಾಲನ್ನು ಡೇರಿಗೆ ನೀಡಿದರೆ. ನಾವು ಗ್ರಾಹಕರಿಗೆ ಉತ್ತಮವಾದ ಸೇವೆಯನ್ನು ನೀಡಲು ಸಾಧ್ಯವಾಗುತ್ತದೆ. ಬಮುಲ್ ನಲ್ಲಿ ನಮ್ಮ ಆಡಳಿತ ಮಂಡಳಿ ಜಾರಿಗೆ ಬಂದಾಗ 14 ಕೋಟಿ ನಷ್ಟದಲ್ಲಿತ್ತು. ಕೇವಲ 11 ತಿಂಗಳಲ್ಲಿ 70 ಕೋಟಿ ರೂ. ಲಾಭಾಂಶ ಮಾಡಿದೆ. ತಿರುಪತಿಗೆ ಬಮುಲ್ ನಿಂದ 2 ಸಾವಿರ ಟನ್ ತುಪ್ಪದ ಪೂರೈಕೆಗೆ ಒಪ್ಪಂದ ಮಾಡಿಕೊಂಡಿದೆ ಇದಕ್ಕೆಲ್ಲಾ ರೈತರ ಸಹಕಾರ ಕಾರಣವಾಗಿದೆ ಎಂದರು.

ಬಮುಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ, ತಂದೆ-ತಾಯಯಂದಿರಿಗೆ ಮೋಸ ಮಾಡದೆ ಮಕ್ಕಳು ಬದುಕಿದರೆ ಅದೇ ಅವರಿಗೆ ನೀಡುವ ದೊಡ್ಡ ಗೌರವ. ಬಮುಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಶೇ.30 ರಷ್ಟು ಮೀಸಲಾತಿಗೆ ಅವಕಾಶ ಮಾಡಿಕೊಡಲಾಗಿದೆ. ತಾಲ್ಲೂಕಿನಲ್ಲಿ ಮೀಸಲಿಟ್ಟಿರುವ ೧೫ ಎಕರೆ ಜಮೀನುನಲ್ಲಿ ಬಮುಲ್ ನ ಯಾವುದಾದರು ಒಂದು ಯೋಜನೆ ಜಾರಿ ಮಾಡಿ ಎಂದು ಡಿಕೆ ಸುರೇಶ್ ಅವರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಶಿಬಿರ ಕಚೇರಿಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವವರಿಗೆ ಗೃಹಪಯೋಗಿ ಸಾಮಾನುಗಳನ್ನ ವಿತರಣೆ ಮಾಡಲಾಯಿತು.

ಈ ವೇಳೆ ಮುನಿರಾಜು, ಹರೀಶ್ ಕುಮಾರ್, ಸತೀಶ್, ಟಿಎಪಿಎಂಸಿಎಸ್ ಅಧ್ಯಕ್ಷ ಡಿ. ಸಿದ್ದರಾಮಯ್ಯ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ಬೆಂಗಳೂರು ಸಹಕಾರ ಒಕ್ಕೂಟದ ನಿರ್ದೇಶಕ ಬಿಟಿ ಶ್ರೀನಿವಾಸಮೂರ್ತಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಗೋವಿಂದರಾಜು, ಟಿಎಪಿಎಂಸಿಎಸ್ ನಿರ್ದೇಶಕರಾದ ಕೆಂಪೇಗೌಡ, ವಿಶ್ವಾಸ್ ಗೌಡ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

17 minutes ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

55 minutes ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

5 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

6 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

12 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

13 hours ago