ಪ್ರತಿವರ್ಷ ರೈತರಿಗಾಗಿ 20 ಕೋಟಿ ವಿನಿಯೋಗ- ಬಮೂಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಶೇ.30ರಷ್ಟು ಮೀಸಲಾತಿ ಜಾರಿ- ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್

ಹಾಲು ಉತ್ಪಾದಕ ರೈತರು ಮಕ್ಕಳ ವಿದೇಶ ವ್ಯಾಸಂಗ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ವಿದ್ಯಾರ್ಥಿಗಳಿಗೆ ಬಮುಲ್ ಟ್ರಸ್ಟ್ ನಿಂದ ಪ್ರತಿವರ್ಷ 20 ಕೋಟಿ ರೂ. ವಿನಿಯೋಗ ಮಾಡಲಾಗುತ್ತಿದೆ. ಬಮುಲ್ ಆಡಳಿತ ಮಂಡಳಿಯ ಎಲ್ಲಾ ಯೋಜನೆಗಳಿಗೆ ಒಕ್ಕೂಟದ 14 ಜನ ನಿರ್ದೇಶಕರು ಪಕ್ಷಾತೀತವಾಗಿ ಸಂಪೂರ್ಣವಾದ ಬೆಂಬಲ ನೀಡುತ್ತಿದ್ದಾರೆ. ಈ ಮೂಲಕ ರೈತರ ಅಭ್ಯುದೇಯಕ್ಕೆ ಶ್ರಮಿಸಲಾಗುತ್ತಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್ ಹೇಳಿದರು.

ನಗರದ ಒಕ್ಕಲಿಗರ ಭವನದಲ್ಲಿ ಬಮುಲ್ ವತಿಯಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಮುಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಉದ್ಯೋಗವನ್ನು ನೀಡುವ ನಿಟ್ಟಿನಲ್ಲಿ ಶೇ.30 ರಷ್ಟು ಮೀಸಲಾತಿಯನ್ನು ಜಾರಿಗೆ ಮಾಡುವ ತೀರ್ಮಾನವನ್ನು ಆಡಳಿತ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಬಿಡಿಸಿಸಿ ಬ್ಯಾಂಕ್ ನಿಂದ ಮಿನಿ ಡೇರಿಗೆ 15 ಲಕ್ಷ, ಎರಡು ಹಸುಗಳಿಗೆ 1.80 ಲಕ್ಷ ರೂ.ಗಳನ್ನು ಶೇ.3 ರಷ್ಡು ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆಯನ್ನು ಜಾರಿ ಮಾಡಲಾಗಿದೆ. ಹಸುಗಳು ಸಾವನ್ನಪ್ಪಿದ್ದಾಗ ರೈತರಿಗೆ ವಿಮೆ ಹಣ ನೀಡಲು 6 ತಿಂಗಳು ಸಮಯವಾಗುತ್ತಿತ್ತು. ಈ ಸಮಯವನ್ನ ಕಡಿಮೆ ಮಾಡಲು ಬಮುಲ್ ವತಿಯಿಂದಲೇ ವಿಮೆ ಯೋಜನೆ ಜಾರಿ ಮಾಡಿ ಕೇವಲ 15 ದಿನಗಳಲ್ಲಿ ಪರಿಹಾರ ಹಣ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

ರೈತರು ಗುಣಮಟ್ಟದ ಹಾಲನ್ನು ಡೇರಿಗೆ ನೀಡಿದರೆ. ನಾವು ಗ್ರಾಹಕರಿಗೆ ಉತ್ತಮವಾದ ಸೇವೆಯನ್ನು ನೀಡಲು ಸಾಧ್ಯವಾಗುತ್ತದೆ. ಬಮುಲ್ ನಲ್ಲಿ ನಮ್ಮ ಆಡಳಿತ ಮಂಡಳಿ ಜಾರಿಗೆ ಬಂದಾಗ 14 ಕೋಟಿ ನಷ್ಟದಲ್ಲಿತ್ತು. ಕೇವಲ 11 ತಿಂಗಳಲ್ಲಿ 70 ಕೋಟಿ ರೂ. ಲಾಭಾಂಶ ಮಾಡಿದೆ. ತಿರುಪತಿಗೆ ಬಮುಲ್ ನಿಂದ 2 ಸಾವಿರ ಟನ್ ತುಪ್ಪದ ಪೂರೈಕೆಗೆ ಒಪ್ಪಂದ ಮಾಡಿಕೊಂಡಿದೆ ಇದಕ್ಕೆಲ್ಲಾ ರೈತರ ಸಹಕಾರ ಕಾರಣವಾಗಿದೆ ಎಂದರು.

ಬಮುಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ, ತಂದೆ-ತಾಯಯಂದಿರಿಗೆ ಮೋಸ ಮಾಡದೆ ಮಕ್ಕಳು ಬದುಕಿದರೆ ಅದೇ ಅವರಿಗೆ ನೀಡುವ ದೊಡ್ಡ ಗೌರವ. ಬಮುಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಶೇ.30 ರಷ್ಟು ಮೀಸಲಾತಿಗೆ ಅವಕಾಶ ಮಾಡಿಕೊಡಲಾಗಿದೆ. ತಾಲ್ಲೂಕಿನಲ್ಲಿ ಮೀಸಲಿಟ್ಟಿರುವ ೧೫ ಎಕರೆ ಜಮೀನುನಲ್ಲಿ ಬಮುಲ್ ನ ಯಾವುದಾದರು ಒಂದು ಯೋಜನೆ ಜಾರಿ ಮಾಡಿ ಎಂದು ಡಿಕೆ ಸುರೇಶ್ ಅವರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಶಿಬಿರ ಕಚೇರಿಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿರುವವರಿಗೆ ಗೃಹಪಯೋಗಿ ಸಾಮಾನುಗಳನ್ನ ವಿತರಣೆ ಮಾಡಲಾಯಿತು.

ಈ ವೇಳೆ ಮುನಿರಾಜು, ಹರೀಶ್ ಕುಮಾರ್, ಸತೀಶ್, ಟಿಎಪಿಎಂಸಿಎಸ್ ಅಧ್ಯಕ್ಷ ಡಿ. ಸಿದ್ದರಾಮಯ್ಯ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ಬೆಂಗಳೂರು ಸಹಕಾರ ಒಕ್ಕೂಟದ ನಿರ್ದೇಶಕ ಬಿಟಿ ಶ್ರೀನಿವಾಸಮೂರ್ತಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಗೋವಿಂದರಾಜು, ಟಿಎಪಿಎಂಸಿಎಸ್ ನಿರ್ದೇಶಕರಾದ ಕೆಂಪೇಗೌಡ, ವಿಶ್ವಾಸ್ ಗೌಡ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

6 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

7 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

8 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

8 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

12 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

14 hours ago